ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಹೈಕೋರ್ಟ್ ತೀರ್ಪು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ

ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ನವದೆಹಲಿ: ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ಗುಜರಾತ್ ಹೈಕೋರ್ಟ್ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ ತೀರ್ಪಿನ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ನ್ಯಾಯಾಧೀಶರ ವಾದವನ್ನು ಅಧ್ಯಯನ ಮಾಡಲಾಗುತ್ತಿದ್ದು, ಈ ವಿಷಯವನ್ನು ಮುಂದೆ ತೆಗೆದುಕೊಂಡು ಹೋಗಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅನರ್ಹತೆಯ ಕುರಿತು ಗುಜರಾತ್ ಹೈಕೋರ್ಟ್‌ನ ಏಕಸದಸ್ಯ ಪೀಠದ ತೀರ್ಪನ್ನು ಅಧ್ಯಯನ ಮಾಡಲಾಗುತ್ತಿದೆ. ಡಾ. ಅಭಿಷೇಕ್ ಸಿಂಘ್ವಿ ಅವರು ಇಂದು ಅಪರಾಹ್ನ ಮಾಧ್ಯಮಗಳ ಮುಂದೆ ವಿವರವಾಗಿ ತಿಳಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಇದನ್ನು "ನ್ಯಾಯದ ವಿಡಂಬನೆ" ಎಂದು ಬಣ್ಣಿಸಿದ್ದಾರೆ."ನೀರವ್ ಮೋದಿ, ಅಮಿ ಮೋದಿ, ನೀಶಾಲ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಇತರ 'ಬ್ಯಾಂಕ್ ವಂಚಕರನ್ನು' ಶಿಕ್ಷಿಸುವ ಬದಲು, ವಂಚನೆ ಮತ್ತು ಸಾರ್ವಜನಿಕ ಹಣವನ್ನು ಲಪಟಾಯಿಸುವ ವಂಚಕರ ಕೆಟ್ಟ ಕೆಲಸಗಳನ್ನು ಬಹಿರಂಗಪಡಿಸುವವರನ್ನು ಶಿಕ್ಷಿಸಲಾಗುತ್ತಿದೆ ಎಂದು ಸುರ್ಜೇವಾಲಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಸತ್ಯ, ಸದಾಚಾರ, ನಿರ್ಭಯತೆ ಮತ್ತು ಅಧಿಕಾರದ ಕೋಟೆಯಲ್ಲಿರುವವರಿಂದ ಉತ್ತರದಾಯಿತ್ವದ ಮಾರ್ಗವನ್ನು ಆರಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. 

ನಾವು ಸತ್ಯ ಮತ್ತು ಸದಾಚಾರದ ಹಾದಿಯಲ್ಲಿ ನಡೆಯುತ್ತೇವೆ, ಏನೇ ಬಂದರೂ... ಸತ್ಯಮೇವ ಜಯತೇ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!