ಸಂಗ್ರಹ ಚಿತ್ರ 
ದೇಶ

ಟಿಎಂಸಿ ಅಡಿಯಲ್ಲಿ ಪಶ್ಚಿಮ ಬಂಗಾಳ ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿ: ಬಿಜೆಪಿ ಆರೋಪ

ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಸೃಷ್ಟಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಅವರು, ರಾಜ್ಯವು ಕಲೆ, ಸಂಸ್ಕೃತಿ ಮತ್ತು ವಿಜ್ಞಾನದ ಕೇಂದ್ರವಾಗಿತ್ತು. ಆದರೀಗ ಅಪರಾಧಗಳು, ದೇಶವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಚುನಾವಣಾ ಸಮಯದಲ್ಲಿ ಅಪರಾಧಿಗಳಿಗೆ ರಕ್ಷಣೆ ನೀಡುವ ಮೂಲಕ ಹಿಂಸಾಚಾರಕ್ಕೆ ಅವರನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಟಿಎಂಸಿಯ ವಿವಿಧ ಬಣಗಳು ದಾಳಿ ಮಾಡುತ್ತಿವೆ. "ಬಂಗಾಳದಲ್ಲಿ ಹಲವು ವರ್ಷಗಳಿಂದ ಹಿಂಸಾಚಾರ ನಡೆಯುತ್ತಲೇ ಇದ್ದು, ಇದೀಗ ಕ್ರಮೇಣ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪರಿಸ್ಥಿತಿಯು 1990 ರ ಬಿಹಾರದಂತೆಯೇ ಇದೆ, ಟಿಎಂಸಿ ರಕ್ತದಿಂದ ಚುನಾವಣೆಯನ್ನು ಕಳಂಕಗೊಳಿಸಿದೆ ಎಂದರು.

ಇದೇ ವೇಳೆ ಚುನಾವಣೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪವನ್ನು ಶ್ಲಾಘಿಸಿದ ಅವರು, ಕೇಂದ್ರ ಪಡೆಗಳನ್ನು ನಿಯೋಜನೆಗೊಳಿಸದೇ ಹೋಗಿದ್ದರೆ, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿತ್ತು ಎಂದು ಹೇಳಿದರು.

ಬಳಿಕ ಚುನಾವಣಾ ಆಯೋಗದ ವಿರುದ್ಧವೂ ಕಿಡಿಕಾರಿದ ಅವರು, ಚುನಾವಣೆ ನಡೆಸಲು ಭದ್ರತಾ ಪಡೆಗಳಿಗೆ ಆಯೋಗ ಒತ್ತಾಯಿಸಿತ್ತು. ಆದರೆ, ಯಾವ ರೀತಿಯ ಪಡೆಗಳು ಇರಬೇಕೆಂದು ನಿರ್ಧರಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT