ಸಂಗ್ರಹ ಚಿತ್ರ 
ದೇಶ

ಟಿಎಂಸಿ ಅಡಿಯಲ್ಲಿ ಪಶ್ಚಿಮ ಬಂಗಾಳ ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿ: ಬಿಜೆಪಿ ಆರೋಪ

ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಸೃಷ್ಟಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಅವರು, ರಾಜ್ಯವು ಕಲೆ, ಸಂಸ್ಕೃತಿ ಮತ್ತು ವಿಜ್ಞಾನದ ಕೇಂದ್ರವಾಗಿತ್ತು. ಆದರೀಗ ಅಪರಾಧಗಳು, ದೇಶವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಚುನಾವಣಾ ಸಮಯದಲ್ಲಿ ಅಪರಾಧಿಗಳಿಗೆ ರಕ್ಷಣೆ ನೀಡುವ ಮೂಲಕ ಹಿಂಸಾಚಾರಕ್ಕೆ ಅವರನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಟಿಎಂಸಿಯ ವಿವಿಧ ಬಣಗಳು ದಾಳಿ ಮಾಡುತ್ತಿವೆ. "ಬಂಗಾಳದಲ್ಲಿ ಹಲವು ವರ್ಷಗಳಿಂದ ಹಿಂಸಾಚಾರ ನಡೆಯುತ್ತಲೇ ಇದ್ದು, ಇದೀಗ ಕ್ರಮೇಣ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪರಿಸ್ಥಿತಿಯು 1990 ರ ಬಿಹಾರದಂತೆಯೇ ಇದೆ, ಟಿಎಂಸಿ ರಕ್ತದಿಂದ ಚುನಾವಣೆಯನ್ನು ಕಳಂಕಗೊಳಿಸಿದೆ ಎಂದರು.

ಇದೇ ವೇಳೆ ಚುನಾವಣೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪವನ್ನು ಶ್ಲಾಘಿಸಿದ ಅವರು, ಕೇಂದ್ರ ಪಡೆಗಳನ್ನು ನಿಯೋಜನೆಗೊಳಿಸದೇ ಹೋಗಿದ್ದರೆ, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿತ್ತು ಎಂದು ಹೇಳಿದರು.

ಬಳಿಕ ಚುನಾವಣಾ ಆಯೋಗದ ವಿರುದ್ಧವೂ ಕಿಡಿಕಾರಿದ ಅವರು, ಚುನಾವಣೆ ನಡೆಸಲು ಭದ್ರತಾ ಪಡೆಗಳಿಗೆ ಆಯೋಗ ಒತ್ತಾಯಿಸಿತ್ತು. ಆದರೆ, ಯಾವ ರೀತಿಯ ಪಡೆಗಳು ಇರಬೇಕೆಂದು ನಿರ್ಧರಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT