ಮುಂಬೈ: ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದ ಸಂಬಂಧಿ ಅಜಿತ್ ಪವಾರ್ ಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ತಿರುಗೇಟು ನೀಡಿದ್ದಾರೆ. ನಾನು ಇನ್ನೂ ದಣಿದಿಲ್ಲ. ನಿವೃತ್ತಿಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶರದ್ ಪವಾರ್ ಅವರ ವಯಸ್ಸಿನ ಕುರಿತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಟೀಕೆಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್ ಸಿಪಿ ಮುಖ್ಯಸ್ಥರು, ನಾನು ದಣಿದಿಲ್ಲ, ಹಾಗೆಯೇ ನಿವೃತ್ತಿಯಾಗಿಲ್ಲ, ಬೆಂಕಿಯಲ್ಲಿದ್ದೇನೆ ಎಂದು ಹೇಳಿದರು.
ಬಿಜೆಪಿ ನಾಯಕರೂ ಸಹ 75 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ಎಂದು ಹೇಳುವ ಮೂಲಕ ತಮ್ಮ ಚಿಕ್ಕಪ್ಪ ಮತ್ತು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಕೆಳಗಿಳಿದು ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಹೇಳಿದ್ದರು.
ಇದನ್ನೂ ಓದಿ: ಎನ್ಸಿಪಿಯ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್ ಪವಾರ್
‘ಮೊರಾರ್ಜಿ ದೇಸಾಯಿ ಅವರು ಯಾವ ವಯಸ್ಸಿನಲ್ಲಿ ಪ್ರಧಾನಿ ಆದರು ಎಂಬುದು ಗೊತ್ತಿದೆಯೇ? ನಾನು ಪ್ರಧಾನಿ ಆಗಲು ಅಥವಾ ಸಚಿವನಾಗಲು ಬಯಸುವುದಿಲ್ಲ. ಜನ ಸೇವೆಯೊಂದೇ ನನ್ನ ಧ್ಯೇಯ. ನನ್ನ ವಯಸ್ಸು 82 ಅಥವಾ 92 ಆಗಿರಲಿ ನಾನು ಇನ್ನೂ ಚುರುಕಾಗಿಯೇ ಇದ್ದೇನೆ. ‘ನನಗೆ ನಿವೃತ್ತಿಯ ಸಲಹೆ ನೀಡಲು ಅವರು ಯಾರು? ನಾನು ಇನ್ನೂ ದುಡಿಯಬಲ್ಲೆ’ ಎಂದು ಗುಡುಗಿದರು.
ತಮ್ಮ ಪುತ್ರನಲ್ಲ ಎಂಬ ಕಾರಣಕ್ಕೆ ನನ್ನನ್ನು ಶರದ ಕಡೆಗಣಿಸಿದರು ಎಂಬ ಅಜಿತ್ ಪವಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಜಿತ್ ಪವಾರ್ ಅವರು ಮಂತ್ರಿ, ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಆದರೆ ಮಗಳು ಸುಪ್ರಿಯಾ ಸುಳೆಗೆ ಯಾವುದೇ ಮಂತ್ರಿ ಹುದ್ದೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.