ಆದಿತ್ಯ ಠಾಕ್ರೆ 
ದೇಶ

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ

ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಅಜಿತ್ ಪವಾರ್, ಇತರ ಎಂಟು ಎನ್ಸಿಪಿ ಶಾಸಕರು ರಾಜ್ಯದ ಮೈತ್ರಿ ಸರಕಾರಕ್ಕೆ ಸೇರಿದ ನಂತರ ಶಿಂಧೆ ಅವರ ಮುಖ್ಯಮಂತ್ರಿ ಕುರ್ಚಿಗೆ ಅಪಾಯ ಎದುರಾಗಬಹುದು. "ರಾಜೀನಾಮೆ ನೀಡುವಂತೆ" ಶಿಂಧೆ ಅವರನ್ನು ಕೇಳಲಾಗಿದೆ ಎಂದು ಠಾಕ್ರೆ ಹೇಳಿದರು.

ಶಿಂಧೆ ನೇತೃತ್ವದ ಸರಕಾರದಲ್ಲಿ ಅಜಿತ್ ಪವಾರ್ ಪ್ರಸ್ತುತ ಉಪ ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ (ಏಕನಾಥ್ ಶಿಂಧೆ) ಅವರಿಗೆ ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಹಾಗೂ ಸರಕಾರದಲ್ಲಿ ಸ್ವಲ್ಪ ಬದಲಾವಣೆಯಾಗಬಹುದು ಎಂಬ ಮಾತನ್ನು ನಾನು ಕೇಳಲ್ಪಟ್ಟೆ" ಎಂದು ಆದಿತ್ಯ ಠಾಕ್ರೆ ಮಾಧ್ಯಮಗಳಿಗೆ ತಿಳಿಸಿದರು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ವಿರುದ್ಧ ಬಂಡಾಯ ಎದ್ದಿರುವ ಅಜಿತ್ ಪವಾರ್ ಹಾಗೂ ಅವರ ಬೆಂಬಲಿಗರು ಮೈತ್ರಿ ಸರಕಾರಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಪಕ್ಷು ಏಕನಾಥ್ ಶಿಂಧೆ ಗುಂಪನ್ನು ಬದಿಗೊತ್ತುತ್ತಿದೆ ಎಂಬ ವರದಿಗಳ ಮಧ್ಯೆ ಠಾಕ್ರೆ ಅವರು ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ, ಎನ್ಸಿಪಿ ನಾಯಕ ಅಜಿತ್ ಪವಾರ್ ರಾಜ್ಯ ಸರಕಾರಕ್ಕೆ ಸೇರಿದಾಗಿನಿಂದ ಶಿಂಧೆ ಅವರ ಗುಂಪಿನ ಸುಮಾರು 20 ಶಾಸಕರು ತಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆಯ (ಯುಬಿಟಿ) ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಅಜಿತ್ ಪವಾರ್ ಹಾಗೂ ಇತರ ಎನ್ಸಿಪಿ ನಾಯಕರು ಸರಕಾರಕ್ಕೆ ಸೇರಿದಾಗಿನಿಂದ ಶಿಂಧೆ ಪಾಳೆಯದ 17-18 ಶಾಸಕರು ನಮ್ಮನ್ನು ಸಂಪರ್ಕಿಸಿದ್ದಾರೆ" ಎಂದು ಸಂಜಯ್ ರಾವುತ್ ಹೇಳಿದ್ದಾರೆ.

ಅಜಿತ್‌ ಪವಾರ್ ನೇತೃತ್ವದ 8 ಮಂದಿ ಎನ್‌ಸಿಪಿ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿ ಸಚಿವರಾಗುತ್ತಿದ್ದಂತೆಯೇ ಶಿಂದೆ ಅವರ ಮುಖ್ಯಮಂತ್ರಿ ಕುರ್ಚಿ ಅಪಾಯದಲ್ಲಿದೆ ಎಂದು ಅವರು ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT