ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ 
ದೇಶ

ಅನರ್ಹತೆ ಪ್ರಕರಣ: ಶಿಂಧೆ, ಉದ್ಧವ್ ಬಣದ ಶಾಸಕರಿಗೆ ಮಹಾರಾಷ್ಟ್ರ ಸ್ಪೀಕರ್ ನೋಟಿಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ...

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶನಿವಾರ ಹೇಳಿದ್ದಾರೆ.

ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ ಪ್ರತಿಯನ್ನು ಸ್ವೀಕರಿಸಿದ್ದೇನೆ ಮತ್ತು ಸಿಎಂ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ವಿಚಾರಣೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ನಾರ್ವೇಕರ್ ಹೇಳಿದ ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ.

ಅನರ್ಹತೆಗೆ ಸಂಬಂಧಿಸಿದಂತೆ ಏಕನಾಥ್ ಶಿಂಧೆ ಬಣದ 40, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಉತ್ತರ ಕೋರಿ ನೋಟಿಸ್ ನೀಡಲಾಗಿದೆ ಎಂದು ನಾರ್ವೇಕರ್ ಪಿಟಿಐಗೆ ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ, ಶಿವಸೇನೆ(ಯುಬಿಟಿ) ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ವಿಧಾನಸಭೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಅವಿಭಜಿತ ಶಿವಸೇನೆಯ ಮುಖ್ಯ ಸಚೇತಕರಾಗಿದ್ದ ಶಾಸಕ ಸುನೀಲ್ ಪ್ರಭು ಅವರು ಕಳೆದ ವರ್ಷ, ಶಿಂಧೆ ಮತ್ತು ಇತರ 15 ಶಾಸಕರು ಬಂಡಾಯವೆದ್ದು, ಜೂನ್ 2022ರಲ್ಲಿ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಿದ ನಂತರ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT