ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ರಸ್ತೆ ಸುರಕ್ಷತೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ರಸ್ತೆ ಸುರಕ್ಷತೆ ವಿಷಯ ಕುರಿತಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಕೋರಿದ ಪರಿಹಾರಗಳನ್ನು ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನವದೆಹಲಿ: ದೇಶದಲ್ಲಿ ರಸ್ತೆ ಸುರಕ್ಷತೆ ವಿಷಯ ಕುರಿತಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಕೋರಿದ ಪರಿಹಾರಗಳನ್ನು ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಮನವಿಯಲ್ಲಿ ಪ್ರಸ್ತಾಪಿಸಲಾದ ಹೆಚ್ಚಿನ ವಿಷಯಗಳು ತಮಿಳುನಾಡಿಗೆ ಸಂಬಂಧಿಸಿವೆ. ಅರ್ಜಿದಾರರು ಸೂಕ್ತ ಪರಿಹಾರಕ್ಕಾಗಿ ರಾಜ್ಯ ಹೈಕೋರ್ಟ್ ನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ದಕ್ಷಿಣ ರಾಜ್ಯದ ನಿವಾಸಿಯಾಗಿರುವ ಅರ್ಜಿದಾರರು, ರಸ್ತೆ ಸುರಕ್ಷತೆಯ ಬಗ್ಗೆ ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. 

ರಸ್ತೆ ಅಪಘಾತ ಪ್ರಕರಣಗಳಲ್ಲಿ ಒಂದೇ ಸ್ಥಳದಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಹೇಳಿದಾಗ, ಅಪಘಾತ ಪ್ರಕರಣಗಳನ್ನು ಸಂಘಟಿತವಾಗಿ ಸುವ್ಯವಸ್ಥಿತಗೊಳಿಸಲಾಗಿದೆ. ನೀವು ಒಳ್ಳೆಯ ಉದ್ದೇಶವನ್ನು ಹೊಂದಿರಬಹುದು ಆದರೆ ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಇದನ್ನು ಮಾಡಲಾಗುವುದಿಲ್ಲ ಎಂದು ಪೀಠವು ಹೇಳಿದೆ.

ಅರ್ಜಿದಾರರು ತಮಿಳುನಾಡು ರಾಜ್ಯಕ್ಕೆ ನಿರ್ದಿಷ್ಟವಾಗಿ ಸ್ವಲ್ಪ ಪರಿಹಾರವನ್ನು ಬಯಸಿದರೆ, ಅವರು ಹೈಕೋರ್ಟ್ ನ್ನು ಸಂಪರ್ಕಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

'Rafale ಫೈಟರ್ ಜೆಟ್, ಕ್ಷಿಪಣಿಗಳೂ ಕೂಡ ನಿಷ್ಪ್ರಯೋಜಕ... ': ಲೆಫ್ಟಿನೆಂಟ್ ಜನರಲ್ Raj Shukla ಅಚ್ಚರಿ ಹೇಳಿಕೆ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

SCROLL FOR NEXT