ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ರಸ್ತೆ ಸುರಕ್ಷತೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ರಸ್ತೆ ಸುರಕ್ಷತೆ ವಿಷಯ ಕುರಿತಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಕೋರಿದ ಪರಿಹಾರಗಳನ್ನು ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನವದೆಹಲಿ: ದೇಶದಲ್ಲಿ ರಸ್ತೆ ಸುರಕ್ಷತೆ ವಿಷಯ ಕುರಿತಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಕೋರಿದ ಪರಿಹಾರಗಳನ್ನು ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಮನವಿಯಲ್ಲಿ ಪ್ರಸ್ತಾಪಿಸಲಾದ ಹೆಚ್ಚಿನ ವಿಷಯಗಳು ತಮಿಳುನಾಡಿಗೆ ಸಂಬಂಧಿಸಿವೆ. ಅರ್ಜಿದಾರರು ಸೂಕ್ತ ಪರಿಹಾರಕ್ಕಾಗಿ ರಾಜ್ಯ ಹೈಕೋರ್ಟ್ ನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ದಕ್ಷಿಣ ರಾಜ್ಯದ ನಿವಾಸಿಯಾಗಿರುವ ಅರ್ಜಿದಾರರು, ರಸ್ತೆ ಸುರಕ್ಷತೆಯ ಬಗ್ಗೆ ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. 

ರಸ್ತೆ ಅಪಘಾತ ಪ್ರಕರಣಗಳಲ್ಲಿ ಒಂದೇ ಸ್ಥಳದಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಹೇಳಿದಾಗ, ಅಪಘಾತ ಪ್ರಕರಣಗಳನ್ನು ಸಂಘಟಿತವಾಗಿ ಸುವ್ಯವಸ್ಥಿತಗೊಳಿಸಲಾಗಿದೆ. ನೀವು ಒಳ್ಳೆಯ ಉದ್ದೇಶವನ್ನು ಹೊಂದಿರಬಹುದು ಆದರೆ ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಇದನ್ನು ಮಾಡಲಾಗುವುದಿಲ್ಲ ಎಂದು ಪೀಠವು ಹೇಳಿದೆ.

ಅರ್ಜಿದಾರರು ತಮಿಳುನಾಡು ರಾಜ್ಯಕ್ಕೆ ನಿರ್ದಿಷ್ಟವಾಗಿ ಸ್ವಲ್ಪ ಪರಿಹಾರವನ್ನು ಬಯಸಿದರೆ, ಅವರು ಹೈಕೋರ್ಟ್ ನ್ನು ಸಂಪರ್ಕಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT