ಜೈರಾಮ್ ರಮೇಶ್ 
ದೇಶ

ದೇಶ ಸೇವೆ ಮಾಡುವ ಯುವಕರ ಕನಸನ್ನು ಅಗ್ನಿಪಥ್ ಛಿದ್ರಗೊಳಿಸಿದೆ: ಕಾಂಗ್ರೆಸ್ ಆರೋಪ

ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ಕುರಿತು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಕಾಂಗ್ರೆಸ್ ಭಾನುವಾರ ವಾಗ್ದಾಳಿ ನಡೆಸಿದ್ದು, ಯುವಕರ ದೇಶ ಸೇವೆ ಮಾಡುವ ಕನಸುಗಳನ್ನು ಭಗ್ನಗೊಳಿಸಿದೆ ಮತ್ತು ಅವರ ಮನಸ್ಸಿನಲ್ಲಿ ವಿವಿಧ ಆತಂಕಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದೆ.

ನವದೆಹಲಿ: ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ಕುರಿತು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಕಾಂಗ್ರೆಸ್ ಭಾನುವಾರ ವಾಗ್ದಾಳಿ ನಡೆಸಿದ್ದು, ಯುವಕರ ದೇಶ ಸೇವೆ ಮಾಡುವ ಕನಸುಗಳನ್ನು ಭಗ್ನಗೊಳಿಸಿದೆ ಮತ್ತು ಅವರ ಮನಸ್ಸಿನಲ್ಲಿ ವಿವಿಧ ಆತಂಕಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದೆ.

‘ಅಗ್ನಿವೀರ’ರಾಗಿ ಭಾರತೀಯ ಸೇನೆಗೆ ಸೇರಿದ ಹಲವು ಯುವಕರು ತರಬೇತಿಯನ್ನು ಮಧ್ಯದಲ್ಲಿಯೇ ಬಿಡುತ್ತಿದ್ದಾರೆ ಎಂಬ ಮಾಧ್ಯಮ ವರದಿಯ ಮೇಲೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಮೇಶ್, ‘ಈ ಹಿಂದೆ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬುದು ಯುವಕರ ಕನಸಾಗಿತ್ತು. ದೇಶ ಸೇವೆ ಮಾಡುವ ಯುವಕರ ಸಂಕಲ್ಪವನ್ನು ಗೌರವಿಸಿ ಅವರಿಗೆ ಉತ್ತಮ ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ನೀಡಲಾಗಿತ್ತು' ಎಂದಿದ್ದಾರೆ. 

ಮುಂದುವರಿದು, 'ಅಗ್ನಿವೀರ್ ಯೋಜನೆಯ ಬುನಾದಿಯೇ ತಪ್ಪಾಗಿದೆ. ಯುವಜನರ ದೇಶಸೇವೆಯ ಕನಸುಗಳನ್ನು ಭಗ್ನಗೊಳಿಸಿದೆ ಮತ್ತು ನಾನಾ ಆತಂಕಗಳನ್ನು ಸೃಷ್ಟಿಸಿದೆ. ಈಗ ಫಲಿತಾಂಶ ಎಲ್ಲರ ಮುಂದಿದೆ' ಎಂದು ರಮೇಶ್ ಹೇಳಿದರು.

ಅಗ್ನಿಪಥ್ ಯೋಜನೆಯು ನಾಲ್ಕು ವರ್ಷಗಳ ಕಾಲ ಸಶಸ್ತ್ರ ಪಡೆಗಳಿಗೆ ಯುವಕರನ್ನು ನೇಮಿಸಿಕೊಳ್ಳುವುದನ್ನು ಒಳಗೊಂಡಿರುತ್ತದೆ. ಅದರಲ್ಲಿ ಶೇ 25ರಷ್ಟು ಮಂದಿಯನ್ನು ಉಳಿಸಿಕೊಳ್ಳುವ ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT