ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ 
ದೇಶ

ದೆಹಲಿಯಲ್ಲಿ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿ.ಮೀ ಮಳೆ

ರಾಷ್ಟ್ರ ರಾಜಧಾನಿಯಲ್ಲಿ  ಶನಿವಾರ ಮತ್ತು ಭಾನುವಾರ ಬೆಳಗಿನವರೆಗೂ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿಮೀ ಮಳೆ ಆಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜುಲೈ 25, 1982ರ  ನಂತರ ಒಂದೇ ದಿನದಲ್ಲಿ ಇಷ್ಟೊಂದು ದಾಖಲೆಯ ಮಳೆಯಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ  ಶನಿವಾರ ಮತ್ತು ಭಾನುವಾರ ಬೆಳಗಿನವರೆಗೂ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿಮೀ ಮಳೆ ಆಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜುಲೈ 25, 1982ರ  ನಂತರ ಒಂದೇ ದಿನದಲ್ಲಿ ಇಷ್ಟೊಂದು ದಾಖಲೆಯ ಮಳೆಯಾಗಿದೆ.

ಯಮುನಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಸರಾಸರಿ ಮಾನ್ಸೂನ್ ಕೋಟಾ ಶೇ. 20 ರಷ್ಟನ್ನು ನಗರ ಪೊರೈಸಿದ್ದು,  ಈ ಮುಂಗಾರಿನಲ್ಲಿ ದೆಹಲಿಯಲ್ಲಿ ಸರಾಸರಿ ದಾಖಲೆಯ 700 ಮಿ ಮೀ ಮಳೆಯಾಗಿದೆ. 

ದೆಹಲಿ ಪ್ರಾಥಮಿಕ ಹವಾಮಾನ ಕೇಂದ್ರ ಸಫ್ದರ್‌ಜಂಗ್ ವೀಕ್ಷಣಾಲಯ ದಾಖಲಿಸಿದ ಮಳೆಯ ಮಾಹಿತಿಯ ಪ್ರಕಾರ, ನಗರವು ಶನಿವಾರ ಬೆಳಿಗ್ಗೆ 8:30 ರಿಂದ ಭಾನುವಾರ ಬೆಳಿಗ್ಗೆ 8:30 ರ ನಡುವೆ ಸುಮಾರು 153 ಮಿಮೀ ಮಳೆಯನ್ನು ಪಡೆದಿದೆ. ಇದು 1958 ರ ನಂತರ ಜುಲೈನಲ್ಲಿ ಸುರಿದ ಮೂರನೇ ದಿನದ ಅತ್ಯಧಿಕ ಹೆಚ್ಚಿನ ಮಳೆಯಾಗಿದೆ. 

ನಿರಂತರ ಮಳೆಯು ದೆಹಲಿ ಎನ್‌ಸಿಆರ್ ನಿವಾಸಿಗಳಿಗೆ ವಾರಾಂತ್ಯದ-ಚಳಿಯ ವಾತಾವರಣವನ್ನು ತಂದರೆ, ಉದ್ಯಾನವನಗಳು, ಅಂಡರ್‌ಪಾಸ್‌ಗಳು, ಮಾರುಕಟ್ಟೆಗಳು ಮತ್ತು ಆಸ್ಪತ್ರೆ ಆವರಣಗಳು ಜಲಾವೃತಗೊಂಡು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. 

ಬಲವಾದ ಗಾಳಿ ಮತ್ತು ತುಂತುರು ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕದಲ್ಲಿ ಅಡಚಣೆ ಉಂಟಾಗಿದೆ. ಪರಿಸ್ಥಿತಿಯನ್ನು ಸುಧಾರಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳಿಗೆ ಭಾನುವಾರ ರಜೆಯನ್ನು ರದ್ದುಗೊಳಿಸಿದ ಸರ್ಕಾರ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT