ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ 
ದೇಶ

ಆರ್‌ಎಸ್ಎಸ್ ಮುಖಂಡನ ವಿರುದ್ಧ ಹೇಳಿಕೆ; ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಮುಖ್ಯಸ್ಥ ಗುರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್‌ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಭೋಪಾಲ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಮುಖ್ಯಸ್ಥ ಗುರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್‌ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ದಿಗ್ವಿಜಯ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 153 ಎ, 469, 500 ಮತ್ತು 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿದ್ದು, 'ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರು ಮತ್ತು ರಾಷ್ಟ್ರೀಯ ನೀರು, ಅರಣ್ಯ ಮತ್ತು ನೆಲದ ಮೇಲಿನ ಗುರು ಗೋಲ್ವಾಲ್ಕರ್ ಜಿ ಅವರ ಚಿಂತನೆಗಳು ಹೀಗಿದ್ದವು' ಎಂದು ಶೀರ್ಷಿಕೆ ನೀಡಿದ್ದಾರೆ.

ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರಿಗೆ ಸಮಾನವಾದ ಹಕ್ಕುಗಳನ್ನು ನೀಡುವುದಕ್ಕಿಂತ ಬ್ರಿಟಿಷ್ ಆಳ್ವಿಕೆಯಲ್ಲಿ ಗುಲಾಮನಾಗಿ ನಾನು ಬದುಕಲು ಬಯಸುತ್ತೇನೆ ಎಂದಿರುವ ಗೋಲ್ವಾಲ್ಕರ್ ಹೇಳಿಕೆಯನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಕ್ರಿಯಿಸಿರುವ ಆರ್‌ಎಸ್‌ಎಸ್ ಹಿರಿಯ ಅಧಿಕಾರಿ ಸುನೀಲ್ ಅಂಬೇಕರ್, 'ಗೋಲ್ವಾಲ್ಕರ್ ಗುರೂಜಿ ಅವರ ದೃಷ್ಟಿಯಲ್ಲಿ, ಈ ಟ್ವೀಟ್ ವಾಸ್ತವವಲ್ಲ ಮತ್ತು ಸಾಮಾಜಿಕ ಅಸಂಗತತೆಯನ್ನು ಉಂಟುಮಾಡುತ್ತದೆ. ಸುಳ್ಳು ಫೋಟೋಶಾಪ್ ಚಿತ್ರವನ್ನು ಹಾಕಲಾಗಿದೆ. ಸಂಘದ ವರ್ಚಸ್ಸಿಗೆ ಕಳಂಕ ತರುವ ಗುರಿ ಇದೆ. ಗುರೂಜಿ ಅಂತಹ ಮಾತನ್ನು ಎಂದಿಗೂ ಹೇಳಲಿಲ್ಲ. ಅವರ ಇಡೀ ಜೀವನವು ಸಾಮಾಜಿಕ ತಾರತಮ್ಯವನ್ನು ಕೊನೆಗೊಳಿಸುವಲ್ಲಿ ತೊಡಗಿಸಿಕೊಂಡಿದೆ' ಎಂದಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ವಕೀಲ ರಾಜೇಶ್ ಜೋಶಿ ಅವರು ಎಫ್‌ಐಆರ್ ದಾಖಲಿಸಿದ್ದು, ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಸಿಂಗ್ ಉದ್ದೇಶಪೂರ್ವಕವಾಗಿ ಗೋಲ್ವಾಲ್ಕರ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಹೇಳಿಕೆಯಿಂದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಕಳೆದ ವಾರ, ಮಧ್ಯಪ್ರದೇಶದ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿಯೊಬ್ಬ ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT