ಭಾರತೀಯ ಮೀನುಗಾರರು 
ದೇಶ

ಅಕ್ರಮ ಮೀನುಗಾರಿಕೆ; 15 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಸಮುದ್ರದ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ರಾಮೇಶ್ವರಂ ಮೂಲದ ಎರಡು ದೋಣಿಗಳಲ್ಲಿದ್ದ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಈ ಎಲ್ಲಾ 15 ಮೀನುಗಾರರನ್ನು ಮುಂದಿನ ಕ್ರಮಕ್ಕಾಗಿ ಮೈಲಾಡಿ ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

ರಾಮನಾಥಪುರಂ: ಸಮುದ್ರದ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ರಾಮೇಶ್ವರಂ ಮೂಲದ ಎರಡು ದೋಣಿಗಳಲ್ಲಿದ್ದ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಈ ಎಲ್ಲಾ 15 ಮೀನುಗಾರರನ್ನು ಮುಂದಿನ ಕ್ರಮಕ್ಕಾಗಿ ಮೈಲಾಡಿ ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಹವಾಮಾನ ವೈಪರೀತ್ಯದಿಂದ ಒಂದು ವಾರದ ವಿರಾಮದ ನಂತರ, ರಾಮೇಶ್ವರಂನಿಂದ ಸುಮಾರು 400 ದೋಣಿಗಳಲ್ಲಿ ಸುಮಾರು 2,500 ಮೀನುಗಾರರು ಸಮುದ್ರಕ್ಕೆ ಹೋಗಿದ್ದರು. ಈ ವೇಳೆ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ರಾತ್ರಿ ಬೆನ್ನಟ್ಟಿದೆ ಎಂದು ಮೂಲಗಳು ತಿಳಿಸಿವೆ. 

ಅದರಂತೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿದೆ. ಈ ಎರಡೂ ದೋಣಿಗಳಲ್ಲಿ ಕ್ರಮವಾಗಿ ಏಳು ಮತ್ತು ಎಂಟು ಮೀನುಗಾರರಿದ್ದರು. ಐಎಂಬಿಎಲ್ ಉಲ್ಲಂಘನೆ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು ಒಟ್ಟಾರೆಯಾಗಿ ಸುಮಾರು 15 ಮೀನುಗಾರರನ್ನು ಬಂಧಿಸಿದೆ.

ಶ್ರೀಲಂಕಾದ ಡೆಲ್ಫ್ಟ್ ದ್ವೀಪದಲ್ಲಿ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದ ಭಾರತೀಯ ಮೀನುಗಾರರ ಎರಡು ಟ್ರಾಲರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಗಳಿಗಾಗಿಗಿ ಬಂಧಿತರನ್ನು ಕಂಕಸಂತುರೈ ಬಂದರಿಗೆ ಕಳುಹಿಸಲಾಗಿದ್ದು, ಮೈಲಾಡಿ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

2023 ರಲ್ಲಿ ಇಲ್ಲಿಯವರೆಗೆ ಶ್ರೀಲಂಕಾ ನೌಕಾಪಡೆಯು 12 ಭಾರತೀಯ ಮೀನುಗಾರರ ಟ್ರಾಲರ್‌ಗಳನ್ನು ಮತ್ತು 74 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ ಮೀನುಗಾರರ ಹಿತದೃಷ್ಟಿಯಿಂದ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ನೌಕಾಪಡೆ ತಿಳಿಸಿದೆ.

ಬಂಧಿತ ಮೀನುಗಾರರನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮಿಳುನಾಡು ಮತ್ತು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರ ಸಂಘ ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT