ಮಮತಾ ಬ್ಯಾನರ್ಜಿ 
ದೇಶ

ರಾಜ್ಯಸಭೆ ಚುನಾವಣೆ: ಡೆರೆಕ್ ಒ'ಬ್ರೇನ್, ಸಾಕೇತ್ ಗೋಖಲೆ ಸೇರಿ 6 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಟಿಎಂಸಿ

ಈ ತಿಂಗಳಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಆರು ರಾಜ್ಯಸಭಾ ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ನವದೆಹಲಿ/ಕೋಲ್ಕತ್ತಾ: ಈ ತಿಂಗಳಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಆರು ರಾಜ್ಯಸಭಾ ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ಈ ಅಭ್ಯರ್ಥಿಗಳಲ್ಲಿ ಡೆರೆಕ್ ಒ'ಬ್ರೇನ್, ಸುಖೇಂದು ಶೇಖರ್ ರೇ ಮತ್ತು ಡೋಲಾ ಸೇನ್ ಸೇರಿದಂತೆ 6 ಅಭ್ಯರ್ಥಿಗಳನ್ನು ಟಿಎಂಸಿ ಇಂದು ಘೋಷಿಸಿದೆ.

2011 ರಿಂದ ಸಂಸದರಾಗಿರುವ ಓ'ಬ್ರೇನ್ ಅವರು ರಾಜ್ಯಸಭೆಯಲ್ಲಿ ಟಿಎಂಸಿ ನಾಯಕರಾಗಿದ್ದರೆ. 2012 ರಲ್ಲಿ ಸಂಸತ್ತಿನ ಮೇಲ್ಮನೆಗೆ ಮೊದಲ ಆಯ್ಕೆಯಾಗಿದ್ದ ರೇ ಅವರು ಉಪ ಮುಖ್ಯ ಸಚೇತಕರಾಗಿದ್ದಾರೆ. 

ಬಾಂಗ್ಲಾ ಸಂಸ್ಕೃತಿ ಮಂಚ ಅಧ್ಯಕ್ಷ ಸಮೀರುಲ್ ಇಸ್ಲಾಂ, ಟಿಎಂಸಿಯ ಅಲಿಪುರ್ದಾರ್ ಜಿಲ್ಲಾಧ್ಯಕ್ಷ ಪ್ರಕಾಶ್ ಚಿಕ್ ಬರೈಕ್, ಆರ್‌ಟಿಐ ಕಾರ್ಯಕರ್ತ ಮತ್ತು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಅವರು  ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಓ'ಬ್ರಿಯಾನ್, ರೇ ಮತ್ತು ಸೇನ್ ಅವರಲ್ಲದೆ, ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ, ಟಿಎಂಸಿಯ ಅಸ್ಸಾಂ ನಾಯಕಿ ಸುಶ್ಮಿತಾ ದೇವ್ ಮತ್ತು ಅದರ ಡಾರ್ಜಿಲಿಂಗ್ ನಾಯಕಿ ಶಾಂತಾ ಛೆಟ್ರಿ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಈ ಆರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಏಪ್ರಿಲ್‌ನಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಶ್ಚಿಮ ಬಂಗಾಳದಿಂದ ಏಳನೇ ರಾಜ್ಯಸಭಾ ಸ್ಥಾನವೂ ಖಾಲಿಯಾಗಿದೆ.

ಜುಲೈ 24 ರಂದು ಈ ಏಳು ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT