ಜೆ.ಪಿ ನಡ್ಡಾ 
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪ್ರಾದೇಶಿಕ ಸಮಾಲೋಚನಾ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ  ಮಾತನಾಡಿ, ಅವರು ದಕ್ಷಿಣದಲ್ಲಿ ಪಕ್ಷವನ್ನು ಗಟ್ಟಿಯಾಗಿ ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಭಾರತದ ರಾಜ್ಯವೊಂದರಿಂದ ಮೋದಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಹೇಳಿದರು.

ಪ್ರತಿನಿಧಿಗಳ ಅಭಿಪ್ರಾಯ ಕೇಳಿದಾಗ ಬಹುತೇಕರು ನರೇಂದ್ರ ಮೋದಿ ಅವರನ್ನು ರಾಮನಾಥಪುರದಿಂದ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ, ಇಂಡಿಯನ್ ಮುಸ್ಲಿಂ ಲೀಗ್‌ನ ಕೆ ನವಾಸ್ಕಾನಿ  ರಾಮನಾಥಪುರಂ ಕ್ಷೇತ್ರದ ಸಂಸದರಾಗಿದ್ದಾರೆ.

ಪಕ್ಷದ ನಾಯಕರ ಸಲಹೆಯು ಮಹತ್ವದ್ದಾಗಿದೆ ಮತ್ತು ಸವಾಲಿನದ್ದಾಗಿದೆ, ಏಕೆಂದರೆ ಮೋದಿ ಪ್ರಸ್ತುತ ಹಿಂದೂ ಪ್ರಾಬಲ್ಯದ ವಾರಣಾಸಿಯನ್ನು ಪ್ರತಿನಿಧಿಸುತ್ತಿದ್ದಾರೆ. ಗಮನಾರ್ಹ ಮುಸ್ಲಿಂ ಮತಗಳನ್ನು ಹೊಂದಿರುವ ರಾಮನಾಥಪುರದಿಂದ ನವಸ್ಕನಿ ಅವರನ್ನು ಸೋಲಿಸಲು ಸಾಧ್ಯವಾದರೆ, ಅದು ಇಡೀ ದಕ್ಷಿಣ ರಾಜ್ಯಗಳಿಗೆ ಸಂದೇಶವನ್ನು ನೀಡುತ್ತದೆ. ಹಿಂದೂಗಳು ಬಿಜೆಪಿಯನ್ನು ಬೆಂಬಲಿಸಿ ಮತಬ್ಯಾಂಕ್‌ನಂತೆ ಸಂಘಟಿಸಿದರೆ ಏನು ಬೇಕಾದರೂ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಿಂದ ಬಿಜೆಪಿ 50 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ಜೆಪಿ ನಡ್ಡಾ ಟಾಸ್ಕ್ ನೀಡಿದ್ದಾರೆ. ಆಡಳಿತ ವಿರೋಧಿ ಅಂಶದಿಂದಾಗಿ ಉತ್ತರದ ಕೆಲವು ರಾಜ್ಯಗಳಲ್ಲಿ ಪಕ್ಷದ ಸೋಲಿನ ಸಂಭವನೀಯತೆಯನ್ನು ಸಮತೋಲನಗೊಳಿಸುವ  ಸಲುವಾಗಿ ಈ ಸವಾಲು ನೀಡಲಾಗಿದೆ.

ವಾರಂಗಲ್‌ನಲ್ಲಿ ಮೋದಿಯವರ ಸಾರ್ವಜನಿಕ ಸಭೆಯ ಯಶಸ್ಸಿಗೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಕನಿಷ್ಠ ಎರಡು ಸಭೆಗಳನ್ನಾದರೂ ಪ್ರಧಾನಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ. ತಮ್ಮ ತಮ್ಮ ರಾಜ್ಯಗಳಲ್ಲಿ ಗುಂಪುಗಾರಿಕೆಯನ್ನು ಕೊನೆಗೊಳಿಸಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಬಿಜೆಪಿ ನಾಯಕರಿಗೆ ನಡ್ಡಾ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT