ಜೆ.ಪಿ ನಡ್ಡಾ 
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪ್ರಾದೇಶಿಕ ಸಮಾಲೋಚನಾ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ  ಮಾತನಾಡಿ, ಅವರು ದಕ್ಷಿಣದಲ್ಲಿ ಪಕ್ಷವನ್ನು ಗಟ್ಟಿಯಾಗಿ ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಭಾರತದ ರಾಜ್ಯವೊಂದರಿಂದ ಮೋದಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಹೇಳಿದರು.

ಪ್ರತಿನಿಧಿಗಳ ಅಭಿಪ್ರಾಯ ಕೇಳಿದಾಗ ಬಹುತೇಕರು ನರೇಂದ್ರ ಮೋದಿ ಅವರನ್ನು ರಾಮನಾಥಪುರದಿಂದ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ, ಇಂಡಿಯನ್ ಮುಸ್ಲಿಂ ಲೀಗ್‌ನ ಕೆ ನವಾಸ್ಕಾನಿ  ರಾಮನಾಥಪುರಂ ಕ್ಷೇತ್ರದ ಸಂಸದರಾಗಿದ್ದಾರೆ.

ಪಕ್ಷದ ನಾಯಕರ ಸಲಹೆಯು ಮಹತ್ವದ್ದಾಗಿದೆ ಮತ್ತು ಸವಾಲಿನದ್ದಾಗಿದೆ, ಏಕೆಂದರೆ ಮೋದಿ ಪ್ರಸ್ತುತ ಹಿಂದೂ ಪ್ರಾಬಲ್ಯದ ವಾರಣಾಸಿಯನ್ನು ಪ್ರತಿನಿಧಿಸುತ್ತಿದ್ದಾರೆ. ಗಮನಾರ್ಹ ಮುಸ್ಲಿಂ ಮತಗಳನ್ನು ಹೊಂದಿರುವ ರಾಮನಾಥಪುರದಿಂದ ನವಸ್ಕನಿ ಅವರನ್ನು ಸೋಲಿಸಲು ಸಾಧ್ಯವಾದರೆ, ಅದು ಇಡೀ ದಕ್ಷಿಣ ರಾಜ್ಯಗಳಿಗೆ ಸಂದೇಶವನ್ನು ನೀಡುತ್ತದೆ. ಹಿಂದೂಗಳು ಬಿಜೆಪಿಯನ್ನು ಬೆಂಬಲಿಸಿ ಮತಬ್ಯಾಂಕ್‌ನಂತೆ ಸಂಘಟಿಸಿದರೆ ಏನು ಬೇಕಾದರೂ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಿಂದ ಬಿಜೆಪಿ 50 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ಜೆಪಿ ನಡ್ಡಾ ಟಾಸ್ಕ್ ನೀಡಿದ್ದಾರೆ. ಆಡಳಿತ ವಿರೋಧಿ ಅಂಶದಿಂದಾಗಿ ಉತ್ತರದ ಕೆಲವು ರಾಜ್ಯಗಳಲ್ಲಿ ಪಕ್ಷದ ಸೋಲಿನ ಸಂಭವನೀಯತೆಯನ್ನು ಸಮತೋಲನಗೊಳಿಸುವ  ಸಲುವಾಗಿ ಈ ಸವಾಲು ನೀಡಲಾಗಿದೆ.

ವಾರಂಗಲ್‌ನಲ್ಲಿ ಮೋದಿಯವರ ಸಾರ್ವಜನಿಕ ಸಭೆಯ ಯಶಸ್ಸಿಗೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಕನಿಷ್ಠ ಎರಡು ಸಭೆಗಳನ್ನಾದರೂ ಪ್ರಧಾನಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ. ತಮ್ಮ ತಮ್ಮ ರಾಜ್ಯಗಳಲ್ಲಿ ಗುಂಪುಗಾರಿಕೆಯನ್ನು ಕೊನೆಗೊಳಿಸಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಬಿಜೆಪಿ ನಾಯಕರಿಗೆ ನಡ್ಡಾ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT