ಎಸ್ ಜೈಶಂಕರ್ 
ದೇಶ

ರಾಜ್ಯಸಭಾ ಚುನಾವಣೆ: ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಎಸ್ ಜೈಶಂಕರ್ ನಾಮಪತ್ರ ಸಲ್ಲಿಕೆ!

ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ರಾಜ್ಯಸಭೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ರಾಜ್ಯಸಭೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಗೋವಾ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಜೈಶಂಕರ್ ಅವರು ಗುಜರಾತ್ ನ ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಗೋವಾ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ 10 ಸದಸ್ಯರು ಜುಲೈ ಮತ್ತು ಆಗಸ್ಟ್ ನಲ್ಲಿ ನಿವೃತ್ತರಾಗುತ್ತಿರುವುದರಿಂದ ಜುಲೈ 24 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಸದಸ್ಯರ ನಿವೃತ್ತಿಯಿಂದಾಗಿ ರಾಜ್ಯಸಭೆಯಲ್ಲಿ ತೆರವಾಗಲಿರುವ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳದ ಡೆರೆಕ್ ಒ’ಬ್ರಿಯಾನ್ ಮತ್ತು ಗುಜರಾತ್‍ನ ಎಸ್ ಜೈಶಂಕರ್ ಸೇರಿದ್ದಾರೆ. ತೆರವಾಗಿರುವ ರಾಜ್ಯಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜುಲೈ 24 ರಂದು ಮತ ಎಣಿಕೆ ನಡೆಯಲಿದ್ದು, ವಿನಯ್ ಡಿ. ತೆಂಡೂಲ್ಕರ್ ಜುಲೈ 28 ರಂದು ನಿವೃತ್ತರಾಗಲಿರುವ ಕಾರಣ ಗೋವಾದಿಂದ ಒಂದು ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಗುಜರಾತ್‍ನಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ದಿನೇಶ್ಚಂದ್ರ ಜೆಮಲ್‍ಭಾಯ್ ಅನವಾಡಿಯಾ, ಲೋಖಂಡವಾಲಾ ಜುಗಲ್‍ಸಿನ್ನಾ ಮಾಥುರ್ಜಿ, ಸುಬ್ರಹ್ಮಣ್ಯಂ ಜೈಶಂಕರ್ ಕೃಷ್ಣಸ್ವಾಮಿ ಅವರು ಆಗಸ್ಟ್ 18 ರಂದು ನಿವೃತ್ತರಾಗುತ್ತಿದ್ದಾರೆ.

ಜೈಶಂಕರ್ ಅವರು 2019 ರಲ್ಲಿ ಗುಜರಾತ್‍ನಿಂದ ರಾಜ್ಯಸಭೆಗೆ ಆಯ್ಕೆಯಾದರು ಮತ್ತು ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವರು 104 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‍ನ ಗೌರವ್ ಪಾಂಡ್ಯ 70 ಮತಗಳನ್ನು ಪಡೆದುಕೊಂಡಿದ್ದರು. ಇತ್ತೀಚಿನ ರಾಷ್ಟ್ರೀಯ ಚುನಾವಣೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಸ್ಮತಿ ಇರಾನಿ ಲೋಕಸಭೆಗೆ ಆಯ್ಕೆಯಾದ ನಂತರ ಗುಜರಾತ್‍ನಿಂದ ಎರಡು ಸ್ಥಾನಗಳು ತೆರವಾದವು. 182 ಸ್ಥಾನಗಳ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿಯ ಬಲ 156 ಇರುವುದರಿಂದ ಜೈಶಂಕರ್ ಗೆಲುವು ನಿಶ್ಚಿತವಾಗಿದೆ.

ಡೆರೆಕ್ ಒ’ಬ್ರಿಯಾನ್ ಡೋಲಾ ಸೇನ್, ಪ್ರದೀಪ್ ಭಟ್ಟಾಚಾರ್ಯ, ಸುಶ್ಮಿತಾ ದೇವ್, ಶಾಂತಾ ಛೆಟ್ರಿ, ಸುಖೇಂದು ಶೇಖರ್ ರೇ ಅವರು ಆಗಸ್ಟ್ 18 ರಂದು ನಿವೃತ್ತರಾಗಲಿರುವುದರಿಂದ ಪಶ್ಚಿಮ ಬಂಗಾಳದ ಆರು ರಾಜ್ಯಸಭಾ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT