ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ 
ದೇಶ

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ನೀಡಲಾಗಿತ್ತು. ನ್ಯಾ. ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ವೈದ್ಯಕೀಯ ವರದಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.

ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ,  ಸಿಂಘ್ವಿ ಮೂರು ಆಸ್ಪತ್ರೆಗಳು ಜೈನ್‌ಗೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿವೆ,

ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್​, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಇಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ನಾಗರಿಕನಿಗೆ ಇದೆ ಎಂದು ಹೇಳಿದೆ.

ಕಳೆದ ವರ್ಷ ಮೇ 30 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರನ್ನು ಬಂಧನಕ್ಕೊಳಪಡಿಸಿತ್ತು. ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT