ದೇಶ

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

Manjula VN

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ನೀಡಲಾಗಿತ್ತು. ನ್ಯಾ. ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ವೈದ್ಯಕೀಯ ವರದಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.

ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ,  ಸಿಂಘ್ವಿ ಮೂರು ಆಸ್ಪತ್ರೆಗಳು ಜೈನ್‌ಗೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿವೆ,

ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್​, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಇಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ನಾಗರಿಕನಿಗೆ ಇದೆ ಎಂದು ಹೇಳಿದೆ.

ಕಳೆದ ವರ್ಷ ಮೇ 30 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರನ್ನು ಬಂಧನಕ್ಕೊಳಪಡಿಸಿತ್ತು. ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.

SCROLL FOR NEXT