ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ಬಿಯಾಸ್ ನದಿ 
ದೇಶ

ಭಾರಿ ಮಳೆಗೆ ಉತ್ತರ ಭಾರತ ಜರ್ಝರಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ, ಪರಿಹಾರ, ರಕ್ಷಣಾ ಕಾರ್ಯಾಚರಣೆ ತೀವ್ರ

ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ  ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮುಂದಾಗಿವೆ.

ನವದೆಹಲಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಭಾರತ ಜರ್ಝರಿತಗೊಂಡಿದೆ. ಕೆಲ ಭಾಗಗಳಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದ್ದು, ಹೆಚ್ಚಿನ ಸಾವು ಮತ್ತು ವಿನಾಶವನ್ನು ಉಂಟುಮಾಡಿದೆ. ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ  ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲದ ಭರವಸೆ ನೀಡಿದ್ದಾರೆ. ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದು, ದೇಶದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯ  ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. 

ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ 18 ಜನರು ಸಾವನ್ನಪ್ಪಿದ್ದರೆ, ಪಂಜಾಬ್ ಮತ್ತು ಹರಿಯಾಣದಲ್ಲಿ 9 ಜನರು, ರಾಜಸ್ಥಾನದಲ್ಲಿ 7 ಮತ್ತು ಉತ್ತರ ಪ್ರದೇಶದಲ್ಲಿ ಮೂವರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ.  ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. 

ಭಾರೀ ಮಳೆ ಮತ್ತು ಪ್ರವಾಹವನ್ನು ನಿಭಾಯಿಸಲು ಒಟ್ಟು 39 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ನಿಯೋಜಿಸಲಾಗಿದೆ. ಪಂಜಾಬ್‌ನಲ್ಲಿ 14 ತಂಡಗಳು ಕಾರ್ಯನಿರ್ವಹಿಸುತ್ತಿದ್ದರೆ, ಹಿಮಾಚಲ ಪ್ರದೇಶದಲ್ಲಿ ಒಂದು ಡಜನ್, ಉತ್ತರಾಖಂಡದಲ್ಲಿ ಎಂಟು ಮತ್ತು ಹರಿಯಾಣದಲ್ಲಿ ಐದು ತಂಡಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT