ಸಂಸದ ಹಾಗೂ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ 
ದೇಶ

ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ನಿಂದ ಲೈಂಗಿಕ ಶೋಷಣೆ, ಕಿರುಕುಳ ಆಗಿದೆ: ಚಾರ್ಜ್ ಶೀಟ್ ನಲ್ಲಿ ದೆಹಲಿ ಪೊಲೀಸರಿಂದ ಉಲ್ಲೇಖ

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಚಾರ್ಜ್​ ಶೀಟ್​ನಲ್ಲಿ ಇದುವರೆಗಿನ ತನಿಖೆಯ ಪ್ರಕಾರ, 6 ಕುಸ್ತಿಪಟುಗಳು ಮಾಡಿದ ಆರೋಪಗಳಿಗಾಗಿ ಅವರನ್ನು ವಿಚಾರಣೆ ಒಳಪಡಿಸಬಹುದು ಹಾಗೂ ಶಿಕ್ಷೆಗೆ ಗುರುಪಡಿಸಬಹುದು’ ಎಂದು ಹೇಳಲಾಗಿದೆ. ಇದುವರೆಗಿನ ತನಿಖೆಯ ಆಧಾರದ ಮೇಲೆ ಬ್ರಿಜ್ ಭೂಷಣ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಬಹುದಿತ್ತು. ಅಲ್ಲದೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ವಿಧಿಸಬಹುದು, ಜೂನ್ 13 ರಂದು ಸಲ್ಲಿಸಲಾದ ಚಾರ್ಜ್ ಶೀಟ್, ಕುಸ್ತಿಪಟುಗಳ ಮೇಲೆ ಸಿಂಗ್ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೆಹಲಿ ಪೊಲೀಸ್ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 6 ಮಹಿಳಾ ಕುಸ್ತಿಪಟುಗಳು ದೂರು ನೀಡಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ದೆಹಲಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದರು. ಜುಲೈ 7 ರಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ದೇಶದ ಪ್ರಮುಖ ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಸಮನ್ಸ್ ನೀಡಿತ್ತು. ಕೋರ್ಟ್ ನೀಡಿದ ಸಮನ್ಸ್‌ನಲ್ಲಿ ಜುಲೈ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

ಇದಲ್ಲದೆ ಸಿಂಗ್ ಅವರ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೂ ನ್ಯಾಯಾಲಯ ಸಮನ್ಸ್ ನೀಡಿದೆ. ತೋಮರ್ ವಿರುದ್ಧ ಐಪಿಸಿ ಸೆಕ್ಷನ್ 109 (ಅಪರಾಧ ಅಧಿಕಾರಿ), 354, 354ಎ, 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಿಸಲಾಗಿದೆ. ಚಾರ್ಜ್ ಶೀಟ್ ಸುಮಾರು 200 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT