ಹಿಮಾಚಲದಲ್ಲಿ ಪ್ರವಾಹ 
ದೇಶ

ಕಸೋಲ್‌ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖು

ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...

ಶಿಮ್ಲಾ/ಕುಲು: ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಬುಧವಾರ ತಿಳಿಸಿದ್ದಾರೆ.

ಲಾಹೌಲ್‌ನಲ್ಲಿ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಆಯಾ ಸ್ಥಳಗಳಿಗೆ ತೆರಳಿವೆ ಎಂದು ಹಿಮಾಚಲ ಸಿಎಂ ಹೇಳಿದ್ದಾರೆ.

ಮಂಗಳವಾರ ಸಂಜೆ ಕುಲು-ಮನಾಲಿ ರಸ್ತೆ ತೆರೆಯಲಾಗಿದ್ದು, ಸುಮಾರು 2,200 ವಾಹನಗಳು ಕುಲು ದಾಟಿವೆ.

ಕಳೆದ ಎರಡು ದಿನಗಳಿಂದ ಮನಾಲಿ ಮತ್ತು ಅದರ ಉಪನಗರಗಳಲ್ಲಿ ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಸಿಗ್ನಲ್ ಇರಲಿಲ್ಲ ಮತ್ತು ಪ್ರವಾಸಿಗರು ತಮ್ಮ ಕುಟುಂಬಗಳನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಕಸೋಲ್‌ನಲ್ಲಿ ಸಿಲುಕಿದ್ದ 2,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಸದ್ಯಕ್ಕೆ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಕಸೋಲ್-ಭುಂಟರ್ ರಸ್ತೆಯಲ್ಲಿನ ಡುಂಖಾರಾ ಭೂಕುಸಿತವನ್ನು ತೆರವುಗೊಳಿಸಲು ನಮ್ಮ ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT