ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ 
ದೇಶ

ಎಎಫ್ಎಸ್ ಪಿಎ ಇಲ್ಲದೇ ಮಣಿಪುರದಲ್ಲಿ ಪರಿಸ್ಥಿತಿ ನಿಯಂತ್ರಿಸುವುದಕ್ಕೆ ಹರಸಾಹಸಪಡುತ್ತಿರುವ ಭದ್ರತಾಪಡೆಗಳು!

ಮಣಿಪುರದಲ್ಲಿ ಹಿಂಸಾಚಾರ ತಹಬದಿಗೆ ತರಲು ಸೇನಾಪಡೆಗಳು ಅವಿರತ ಶ್ರಮಿಸುತ್ತಿವೆ. ಆದರೆ ಸೇನಾಪಡೆಗಳಿಗೆ ವಿಶೇಷಾಧಿಕಾರ ಇಲ್ಲದೇ ಕಾರ್ಯಾಚರಣೆ ನಡೆಸುವುದು ಕಷ್ಟ ಸಾಧ್ಯವಾಗುತ್ತಿದೆ.

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ತಹಬದಿಗೆ ತರಲು ಸೇನಾಪಡೆಗಳು ಅವಿರತ ಶ್ರಮಿಸುತ್ತಿವೆ. ಆದರೆ ಸೇನಾಪಡೆಗಳಿಗೆ ವಿಶೇಷಾಧಿಕಾರ ಇಲ್ಲದೇ ಕಾರ್ಯಾಚರಣೆ ನಡೆಸುವುದು ಕಷ್ಟ ಸಾಧ್ಯವಾಗುತ್ತಿದೆ. 

19 ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರದೇಶಗಳನ್ನು ಪ್ರಕ್ಷುಬ್ಧ ಪ್ರದೇಶಗಳೆಂದು ಗುರುತಿಸಲಾಗಿದ್ದು, ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕಾದರೆ ಮ್ಯಾಜಿಸ್ಟ್ರೇಟ್ ಒಬ್ಬರ ಉಪಸ್ಥಿತಿ ಇರಲೇಬೇಕೆಂದು ಆಗ್ರಹಿಸುತ್ತಿವೆ.  ತಮ್ಮ ವಿರುದ್ಧದ ಸುಳ್ಳು ಆರೋಪಗಳು ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆಗ್ರಹವನ್ನು ಸೇನಾ ಅಧಿಕಾರಿಗಳು ಮುಂದಿಟ್ಟಿದ್ದಾರೆ. 

19 ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಮಣಿಪುರದಲ್ಲಿ ಎಎಫ್ಎಸ್ ಪಿಎ ವ್ಯಾಪ್ತಿಯಿಂದ ಹೊರಗಿಡಲಾಗಿದೆ.  ಎಎಫ್ಎಸ್ ಪಿಎ ಸೇನಾಪಡೆಗಳಿಗೆ  ಸಂಘರ್ಷದ ಪ್ರದೇಶಗಳಲ್ಲಿ ವಿಶೇಷ ಅಧಿಕಾರವನ್ನು ನೀಡುತ್ತದೆ.  ಮಣಿಪುರದಲ್ಲಿ 2022 ರ ಏಪ್ರಿಲ್ ನಲ್ಲಿ 15 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಎಫ್ಎಸ್ ಪಿಎ ಯನ್ನು ತೆಗೆದುಹಾಕಲಾಗಿತ್ತು. ಇದರೊಂದಿಗೆ ಈ ವರ್ಷ ಮಾರ್ಚ್ ನಲ್ಲಿ ಮತ್ತೆ 4 ಠಾಣೆಗಳ ವ್ಯಾಪ್ತಿಯಲ್ಲಿ ಎಎಫ್ಎಸ್ ಪಿಎಯನ್ನು ಹಿಂಪಡೆಯಲಾಗಿತ್ತು.

ಈ ಪ್ರದೇಶಗಳು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿವೆ ಮತ್ತು ತೊಂದರೆಗೊಳಗಾದ ಪ್ರದೇಶ ಕಾಯಿದೆಯು ಈ ವರ್ಷದ ಏಪ್ರಿಲ್‌ನಿಂದ ಇನ್ನೂ ಆರು ತಿಂಗಳ ಕಾಲ ರಾಜ್ಯದ ಇತರ ಭಾಗಗಳಲ್ಲಿ ಜಾರಿಯಲ್ಲಿರುತ್ತದೆ.

ಅಧಿಕಾರಿಗಳ ಪ್ರಕಾರ, ಸೇನಾಪಡೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಾಧಾರ ಆರೋಪ ಮಾಡಲಾಗುತ್ತಿದ್ದು, ಆರೋಪಿತ ದೌರ್ಜನ್ಯಗಳ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ನೀಡುವಂತೆ ಕೇಳಿದ್ದ ಮಣಿಪುರ ಬಾರ್ ಅಸೋಸಿಯೇಷನ್ ಹೇಳಿಕೆಯ ಬಗ್ಗೆ ತೀವ್ರ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT