ಎನ್ ಡಿಆರ್ ಎಫ್ ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಭೋರ್ಗರೆದು ಹರಿಯುತ್ತಿರುವ ನದಿ ನೀರಿನ ಮಧ್ಯೆ ಹಗ್ಗದ ಸಹಾಯದಿಂದ 28 ಮಂದಿಯ ರಕ್ಷಣೆ; ವಿಡಿಯೋ

ದೇಶದ ಅತ್ಯಂತ ಸುಂದರ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾದ ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಭಾರೀ ಮಳೆ, ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಜೀವ, ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ.

ಶಿಮ್ಲಾ: ದೇಶದ ಅತ್ಯಂತ ಸುಂದರ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾದ ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಭಾರೀ ಮಳೆ, ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಜೀವ, ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ.

ಈ ಮಧ್ಯೆ ರಾಜ್ಯದ ಕಾರಾ ಪ್ರದೇಶದ ಕಿನ್ನೌರ್‌ ನಲ್ಲಿ ನೀರಿನ ಮಧ್ಯೆ ಸಿಲುಕಿದ್ದ  28 ಮಂದಿಯನ್ನು ಎನ್ ಡಿಆರ್ ಎಫ್, ಐಟಿಬಿಟಿ ಮತ್ತು ಗೃಹ ರಕ್ಷಕ ದಳದ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಭೋರ್ಗರೆದು ಹರಿಯುತ್ತಿರುವ ನದಿ ನೀರಿನ ಮಧ್ಯೆ ಹಗ್ಗದ ಸಹಾಯದಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು ಎನ್ ಡಿಆರ್ ಎಫ್ ತಿಳಿಸಿದೆ. 

ಮತ್ತೊಂದೆಡೆ ಚಂದ್ರತಾಲ್ ನ ಹಿಮನದಿ ಬಳಿ ಸಿಲುಕಿದ್ದ ಏಳು ಚಾರಣಿಗರನ್ನು ಭಾರತೀಯ ವಾಯುಪಡೆ ರಕ್ಷಿಸಿದೆ. ಈ ಕುರಿತ ವಿಡಿಯೋವನ್ನು ಭಾರತೀಯ ವಾಯುಪಡೆ ಟ್ವೀಟ್ ಮಾಡಿದ್ದು, ಧೈರ್ಯಯುತ ರಕ್ಷಣಾ ಕಾರ್ಯಾಚರಣೆಯಲ್ಲಿ, ಕನಿಷ್ಠ ಹವಾಮಾನ ಮತ್ತು ಹಿಮನದಿಯ ಪರಿಸ್ಥಿತಿಯಲ್ಲಿ ಚಂದ್ರತಾಲ್ ಹಿಮನದಿ ಸರೋವರದ ಬಳಿಯಿಂದ ಏಳು ಚಾರಣಿಗರನ್ನು ರಕ್ಷಿಸಿರುವುದಾಗಿ ತಿಳಿಸಿದೆ. ಚಂದ್ರತಾಲ್ ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT