ಸಾಂದರ್ಭಿಕ ಚಿತ್ರ 
ದೇಶ

ಗಗನಕ್ಕೇರಿದ ಟೊಮೆಟೊ: ಕೆಜಿಗೆ ರೂ. 90 ರಂತೆ ರಿಯಾಯಿತಿ ದರದಲ್ಲಿ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ!

ಆಹಾರ ತಯಾರಿಕೆಯಲ್ಲಿ ಪ್ರಮುಖವಾದ ಟೊಮೆಟೋ ಬೆಲೆ ಗಗನಕ್ಕೇರಿರುವಂತೆಯೇ ಕೇಂದ್ರ ಸರ್ಕಾರ ಕೆಜಿಗೆ ರೂ. 90 ರಂತೆ ರಿಯಾಯಿತಿ ಬೆಲೆಯಲ್ಲಿ ಟೊಟೊಮೋ ಮಾರಾಟ ಆರಂಭಿಸುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿಯನ್ನು ನೀಡಿದೆ.

ನವದೆಹಲಿ: ಆಹಾರ ತಯಾರಿಕೆಯಲ್ಲಿ ಪ್ರಮುಖವಾದ ಟೊಮೆಟೋ ಬೆಲೆ ಗಗನಕ್ಕೇರಿರುವಂತೆಯೇ ಕೇಂದ್ರ ಸರ್ಕಾರ ಕೆಜಿಗೆ ರೂ. 90 ರಂತೆ ರಿಯಾಯಿತಿ ಬೆಲೆಯಲ್ಲಿ ಟೊಟೊಮೋ ಮಾರಾಟ ಆರಂಭಿಸುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿಯನ್ನು ನೀಡಿದೆ.

ಭಾರತೀಯ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ ಕೇಂದ್ರ ಸರ್ಕಾರದ ಪರವಾಗಿ ಟೊಮೆಟೊ ಮಾರಾಟ ನಡೆಸುತ್ತಿವೆ. ಕಳೆದ ಕೆಲವು ವಾರಗಳಿಂದ ಟೊಮೊಟೊ ಸಗಟು ದರ ತೀವ್ರಗತಿಯಲ್ಲಿ ಏರಿಕೆಯಾಗಿದ್ದು, ಶುಕ್ರವಾರ ಭಾರೀ ಮಳೆಯಿಂದಾಗಿ ದೇಶದ ಹಲವು ಕಡೆಗಳಲ್ಲಿ ಒಂದು ಕೆಜಿ ಟೊಮೆಮೊ ಬೆಲೆ ರೂ.244ಕ್ಕೆ ಏರಿತ್ತು.

"17,000 ಕೆಜಿ ಟೊಮೆಟೊಗಳಲ್ಲಿ ಶೇ.80 ರಷ್ಟು  ಸಂಜೆಯವರೆಗೆ ಮಾರಾಟವಾಗಿದೆ. ನಾಳೆಯಿಂದ ದೆಹಲಿ-ಎನ್‌ಸಿಆರ್‌ನಲ್ಲಿ ಮಾರಾಟ ಪ್ರಮಾಣವನ್ನು ಹೆಚ್ಚಿಸುತ್ತೇವೆ ಎಂದು ಎನ್‌ಸಿಸಿಎಫ್ ವ್ಯವಸ್ಥಾಪಕ ನಿರ್ದೇಶಕ ಅನಿಸ್ ಜೋಸೆಫ್ ಚಂದ್ರ ಹೇಳಿದ್ದಾರೆ.

ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವೆಡೆ ರಿಯಾಯಿತಿ ದರದ ಟೊಮೇಟೊ ಖರೀದಿಗೆ ಜನರು ಸರತಿ ಸಾಲಿನಲ್ಲಿ ಬರುತ್ತಿದ್ದಾರೆ. ಕರೋಲ್ ಬಾಗ್, ಪಟೇಲ್ ನಗರ, ಪುಸಾ ರಸ್ತೆ, ಸಿಜಿಒ ಕಾಂಪ್ಲೆಕ್ಸ್, ನೆಹರು ಪ್ಲೇಸ್, ಗೋವಿಂದ್ ಲಾಲ್ ಶಿಕಾ ಮಾರ್ಗ್, ಆದರ್ಶ ನಗರ, ವಜೀರ್‌ಪುರದ ಜೆಜೆ ಸ್ಲಂ ಮತ್ತು ಧೋಧಪುರ್ ಶಿವಮಂದಿರದಂತಹ ಪ್ರದೇಶಗಳಲ್ಲಿ ಸುಮಾರು 20 ಸಂಚಾರ ವಾಹನಗಳನ್ನು ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT