ಮಳೆಯಿಂದ ಅಸ್ತವ್ಯಸ್ತಗೊಂಡ ನವದೆಹಲಿ 
ದೇಶ

ರಾಷ್ಟ್ರ ರಾಜಧಾನಿಯಲ್ಲಿ ನಾಳೆಯೂ ಭಾರಿ ಮಳೆ: 'ಯೆಲ್ಲೂ' ಆಲರ್ಟ್ ಘೋಷಣೆ

ರಾಷ್ಟ್ರ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನಾಳೆಯೂ ಗುಡುಗು  ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೂ ಆಲರ್ಟ್ ಘೋಷಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನಾಳೆಯೂ ಗುಡುಗು  ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೂ ಆಲರ್ಟ್ ಘೋಷಿಸಿದೆ.

 ಲಕ್ಷ್ಮೀನಗರ, ಅಯನಗರ, ಲೊದಿ ರಸ್ತೆ, ಮುಂಗೇಶ್ಪರ್ ಮತ್ತಿತರ ಕಡೆಗಳಲ್ಲಿ ಶುಕ್ರವಾರ ಹಗುರ ಮಳೆಯಾಗಿದೆ. ಲುಟಿಯನ್ಸ್‌ನ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಪ್ರದೇಶಗಳಲ್ಲಿ ಲಘು ಪ್ರಮಾಣದ ತುಂತುರು ಮಳೆಯಾಗಿದೆ.

ನಾಳೆ ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು,ಮುನ್ಸೂಚನೆಯಂತೆ  ಯೆಲ್ಲೂ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಳೆ ಪ್ರಮಾಣ ತಿಳಿಸಲು ಭಾರತೀಯ ಹವಾಮಾನ ಇಲಾಖೆ ಬಣ್ಣದ ಕೋಡ್ ಬಳಸುತ್ತದೆ. ಗ್ರೀನ್ ಆಲರ್ಟ್ ಎಂದರೆ ಎಲ್ಲವೂ ಚೆನ್ನಾಗಿದೆ ಎಂಬರ್ಥ ಆದರೆ ಯೆಲ್ಲೂ ಆಲರ್ಟ್ ಎಂದು ತೀವ್ರ ಕೆಟ್ಟ ಹವಾಮಾನವನ್ನು ಸೂಚಿಸುತ್ತದೆ. 

ಯೆಲ್ಲೂ ಆಲರ್ಟ್ ಹವಾಮಾನವು ಕೆಟ್ಟದಾಗಿ ಬದಲಾಗಿ,ದೈನಂದಿನ ಚಟುವಟಿಕೆಗಳನ್ನು ಅಡ್ಡಿಪಡಿಸುತ್ತದೆ ಎಂದು ಅದು ಸೂಚಿಸುತ್ತದೆ. ರಸ್ತೆ ಮತ್ತು ಚರಂಡಿ ಬಂದ್, ವಿದ್ಯುತ್ ಸರಬರಾಜಿನ ಅಡಚಣೆಯೊಂದಿಗೆ ಅತ್ಯಂತ ಕೆಟ್ಟ ಹವಾಮಾನದ ಎಚ್ಚರಿಕೆಯಾಗಿ ಈ ರೀತಿಯ ಮುನ್ಸೂಚನೆ ನೀಡಲಾಗುತ್ತದೆ. ಹವಾಮಾನವು ಜೀವಕ್ಕೆ ಗಮನಾರ್ಹ ಅಪಾಯವನ್ನುಂಟು ಮಾಡಿದಾಗ 'ರೆಡ್ ಆಲರ್ಟ್' ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT