ಅಜಿತ್ ಪವಾರ್ 
ದೇಶ

ಜುಲೈ 18 ರಂದು ಅಜಿತ್ ಪವಾರ್ ರಿಂದ ಪ್ರಧಾನಿ ಮೋದಿ ಭೇಟಿ

ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ...

ನಾಸಿಕ್: ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ ಹೇಳಿದ್ದಾರೆ.

ಪ್ರಮುಖ ಹಣಕಾಸು ಮತ್ತು ಯೋಜನಾ ಖಾತೆಯನ್ನು ಪಡೆದುಕೊಂಡಿರುವ ಶರದ್ ಪವಾರ್ ಅವರು, ಜುಲೈ 2 ರಂದು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ನಾನು ಮತ್ತು ಇತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಚಿವರು ಖಾತೆಗಳ ಹಂಚಿಕೆಯಿಂದ ಸಂತೋಷವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಪವಾರ್, "ನಾನು ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ಸಭೆಯಲ್ಲಿ, ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಅವರೊಂದಿಗೆ ಚರ್ಚಿಸುತ್ತೇನೆ. (ಎನ್‌ಸಿಪಿ ನಾಯಕ) ಪ್ರಫುಲ್ ಪಟೇಲ್ ಮತ್ತು ನಾನು ಎನ್‌ಡಿಎ ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ಹೇಳಿದ್ದಾರೆ.

ಮಹಾ ಸಿಎಂ ಶಿಂಧೆ ಬಣ ಹಣಕಾಸು ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲದ ಕಾರಣ, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸೂಚಿಸಲಾಗಿದೆ ಎಂದು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ನಾಯಕ, "ನನಗೆ ಗೊತ್ತಿಲ್ಲ ಅನವಶ್ಯಕವಾಗಿ ವಾತಾವರಣವನ್ನು ಕೆಡಿಸುವ ಪ್ರಯತ್ನ ಇದಾಗಿದೆ. ಪೋರ್ಟ್‌ಫೋಲಿಯೋ ಹಂಚಿಕೆಯಿಂದ ನಮಗೆ ಸಂತೋಷವಾಗಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT