ಪ್ರತಿಭಟನಾ ನಿರತರನ್ನು ಚದುರಿಸಲು ಜಲ ಫಿರಂಗಿ ಬಳಕೆ 
ದೇಶ

ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. 

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. 

ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸ್ ಅಧಿಕಾರಿಗಳು ಜಲ ಫಿರಂಗಿ ಪ್ರಯೋಗಿಸಿದ ಪರಿಣಾಮ, ಕಾಂಗ್ರೆಸ್ ನ ಹಲವು ಕಾರ್ಯಕರ್ತರು ಹಾಗೂ ನಾಯಕರು ಗಾಯಗೊಂಡಿದ್ದಾರೆ.

ಭೋಪಾಲ್ ನ ನೂತನ ಜಿಲ್ಲಾ ಅಧ್ಯಕ್ಷ ಮೋನು ಸಕ್ಸೇನಾ, ಮಹಿಳಾ ಕಾರ್ಯಕರ್ತೆ ಮಹಾಕ್ ರಾಣ ತೀವ್ರವಾಗಿ ಗಾಯಗೊಂಡಿರುವ ಕಾಂಗ್ರೆಸ್ ನಾಯಕರಾಗಿದ್ದಾರೆ.

ಸುಮಾರು 200 ಕ್ಕೂ ಹೆಚ್ಚು ಕಾಂಗ್ರೆಸ್ ನ ಕಾರ್ಯಕರ್ತರು ಹಗರಣವನ್ನು ವಿರೋಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ಕೈಗೊಂಡಿದ್ದರು. ಈ ವೇಳೆ ಬಂಗಾಂಗ ಕ್ರಾಸಿಂಗ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದಾಟಿ ಮುಂದೆ ಹೋಗಲು ಪ್ರತಿಭಟನಾ ನಿರತರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ದಾಟಿ, ಅದರ ಮೇಲೇರಿದ ಹಿನ್ನೆಲೆಯಲ್ಲಿ ಪೊಲೀಸರು ಜಲ ಫಿರಂಗಿಯನ್ನು ಪ್ರಯೋಗಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT