ಮಣಿಪುರದಲ್ಲಿ ಹಿಂಸಾಚಾರ 
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು, 3 ಟ್ರಕ್ ಗಳಿಗೆ ಬೆಂಕಿಗಾಹುತಿ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಇಂಫಾಲದ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದು, ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದ ಮತ್ತೆ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೂರು ಸರಕು ಸಾಗಾಣಿಕಾ ಟ್ರಕ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT