ಬೆಂಗಳೂರಿನಲ್ಲಿ ಜಿ20 ಹಣಕಾಸು ಸಚಿವರ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ 
ದೇಶ

ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಜಿ 20 ಸಭೆ

ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.

ನವದೆಹಲಿ: ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.

ಈ ಸಭೆ  ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯುರೋಪಿಯನ್ ಕಮಿಷನ್ ಮತ್ತು ಏಷ್ಯನ್ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ (ಎಐಐವಿ) ಮತ್ತಿತರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಜೊತೆಗೆ ಹೂಡಿಕೆದಾರರ ದುಂಡು ಮೇಜನ ಸಭೆ, ತೆರಿಗೆ ವಿಚಾರ ಸಂಕಿರಣದಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ. 

ಜಾಗತಿಕ ಆರ್ಥಿಕತೆ ಮತ್ತು ಅಂತರರಾಷ್ಟ್ರೀಯ ಹಣಕಾಸು ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಜಂಟಿಯಾಗಿ ಮೂರನೇ ಜಿ-20  ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ವೀಕರಿಸಿದ ಆದೇಶದ ಆಧಾರದ ಮೇಲೆ ವಿವಿಧ ಕೆಲಸದ ಗುರಿ ಸಾಧಿಸಲು ಮೂರನೇ ಜಿ-20 ಮೂರನೇ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಕಳೆದ ವಾರ ಹೇಳಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT