ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ

ಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್‌ಗಳಿಗೆ ಭಾರತೀಯ ಸೇನಾ ಸಂಸ್ಥೆಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಶಂಕಿತ  ಐಎಸ್‌ಐ ಏಜೆಂಟ್‌ನನ್ನು ಭಾನುವಾರ ಲಖನೌದಲ್ಲಿ ಬಂಧಿಸಲಾಗಿದೆ

ಲಖನೌ: ಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್‌ಗಳಿಗೆ ಭಾರತೀಯ ಸೇನಾ ಸಂಸ್ಥೆಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಶಂಕಿತ  ಐಎಸ್‌ಐ ಏಜೆಂಟ್‌ನನ್ನು ಭಾನುವಾರ ಲಖನೌದಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಗೊಂಡಾ ನಿವಾಸಿ ರಯೀಸ್ ಎಂಬಾತನನ್ನುಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ  ಬಂಧಿಸಿದೆ.

ಆತನನ್ನು ಎಟಿಎಸ್ ಕೇಂದ್ರ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದಾಗ ಬೇಹುಗಾರಿಕೆಯಲ್ಲಿ ಭಾಗಿಯಾಗಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ವಿಶೇಷ ಡಿಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂಬೈನಲ್ಲಿ ರಯೀಸ್  ಒಬ್ಬನ ಸಂಪರ್ಕಕ್ಕೆ ಬಂದಿದ್ದು, ಆತ ಭಾರತದ ವಿರುದ್ಧ ಗೂಢಚಾರಿಕೆ ಮಾಡಲು ಮನವೊಲಿಸಿದ್ದ. ಅಲ್ಲದೇ ಪಾಕ್ ಪ್ರಜೆಯಿಂದ ದುಬೈನಲ್ಲಿ ಹಣ ಮತ್ತು ಉದ್ಯೋಗದ ಭರವಸೆ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

2022 ರಲ್ಲಿ ರಯೀಸ್ ಗೆ ವಿದೇಶಿ ಸಂಖ್ಯೆಯಿಂದ ವಾಟ್ಸಾಪ್  ನಲ್ಲಿ ಕರೆಯೊಂದು ಬಂದಿದ್ದು, ಹುಸೇನ್ ಸಂಪರ್ಕಿಸಲು ಹೇಳಲಾಗಿತ್ತು. ನಂತರ ಭಾರತದ ಪ್ರಮುಖ ಮಿಲಿಟರಿ ಸ್ಥಳಗಳ ಚಿತ್ರಗಳನ್ನು ಕಳುಹಿಸಲು ಆತನಿಗೆ ಹೇಳಲಾಗಿತ್ತು. ಸಲ್ಮಾನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿ ಕೂಡ ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಯೀಸ್‌ಗೆ 15,000 ರೂಪಾಯಿ ಸಿಕ್ಕಿದ್ದು, ಬಾಂಗ್ಲಾದೇಶ ನೋಂದಾಯಿತ ಮೊಬೈಲ್ ಸಂಖ್ಯೆ ಮೂಲಕ ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಯೀಸ್ ವಿರುದ್ಧ  ಭಾರತೀಯ ದಂಡ ಸಂಹಿತೆ 121ಎ ಮತ್ತು 123  ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ಲಖನೌ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಅಪರಿಚಿತ ವ್ಯಕ್ತಿ ಮತ್ತು ಸಲ್ಮಾನ್‌ನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹರಿಯಾಣದಲ್ಲೂ ಮತಗಳ್ಳತನ: ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

ಸಶಸ್ತ್ರ ಪಡೆಗಳಲ್ಲಿ 'ಮೀಸಲಾತಿ'ಗೆ ಒತ್ತಾಯ: ಅರಾಜಕತೆ ಸೃಷ್ಟಿಸಲು ರಾಹುಲ್ ಪ್ರಯತ್ನ- ರಾಜನಾಥ್ ಸಿಂಗ್ ಆರೋಪ

ಆಪ್ತಮಿತ್ರನಿಗೆ ಕೈ ಕೊಡ್ತಾ ಭಾರತ? ಡಿಸೆಂಬರ್ ನಿಂದ ರಷ್ಯಾ ಕಚ್ಚಾ ತೈಲ ಆಮದು ಕಡಿತ; ಒಪ್ಪಂದದಿಂದ ಹಿಂದೆ ಸರಿದ ಕಂಪನಿಗಳು

ನ್ಯೂಯಾರ್ಕ್‌ನಲ್ಲಿ ನೆಹರೂರನ್ನು ಹೊಗಳಲಾಯಿತು, ಆದರೆ ಭಾರತ ಅವಮಾನಿಸುತ್ತಿದೆ: ಪ್ರಿಯಾಂಕಾ

ನ್ಯೂಯಾರ್ಕ್ ಅಂಗಳದಲ್ಲಿ ನಿಂತು Nehru ಮಾತು ಉಲ್ಲೇಖ; ಟ್ರಂಪ್​ಗೆ ಎಚ್ಚರಿಕೆ ಕೊಟ್ಟ ಜೊಹ್ರಾನ್ ಮಮ್ದಾನಿ: Video

SCROLL FOR NEXT