ಪ್ರಾತಿನಿಧಿಕ ಚಿತ್ರ 
ದೇಶ

ಕೆಜಿಗೆ 80 ರೂ.ನಂತೆ ಟೊಮೇಟೊ ಮಾರಾಟ ಮಾಡಲು ನಿರ್ಧರಿಸಿದ ಕೇಂದ್ರ; ಇಂದಿನಿಂದಲೇ ಲಭ್ಯ

ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆ ಪ್ರಕಾರ, ತನ್ನ ಮಧ್ಯಪ್ರವೇಶದಿಂದ ದೇಶದ ಹಲವಾರು ಸ್ಥಳಗಳಲ್ಲಿ ಪ್ರತಿ ಕೆಜಿಗೆ 90 ರೂ.ಗೆ ರಿಯಾಯಿತಿ ದರದಲ್ಲಿ ಟೊಮೇಟೊ ಮಾರಾಟ ಮಾಡಲಾಗುತ್ತಿದೆ. ಟೊಮೇಟೊ ಬೆಲೆಯಲ್ಲಿ ಕುಸಿತವಾಗಿದೆ ಎಂದು ತಿಳಿಸಿದೆ.

ದೇಶದ 500ಕ್ಕೂ ಹೆಚ್ಚು ಕಡೆಗಳಲ್ಲಿ ಬೆಲೆ ಏರಿಕೆ ಪರಿಸ್ಥಿತಿಯ ಮರು ಮೌಲ್ಯಮಾಪನ ನಡೆಸಿದ ನಂತರ, ಇಂದಿನಿಂದ (ಜು.16) ದೇಶದ ಹಲವೆಡೆ ಕೆಜಿ ಟೊಮೇಟೊವನ್ನು80 ರೂ.ನಂತೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸಹಕಾರ ಕ್ಷೇತ್ರದ ಎನ್ಎಎಫ್ಇಡಿ ಮತ್ತು ಎನ್‌ಸಿಸಿಎಫ್ ಮೂಲದ ದೆಹಲಿ, ನೋಯ್ಡಾ, ಲಖನೌ, ಕಾನ್ಪುರ, ವಾರಣಾಸಿ, ಪಾಟ್ನಾ, ಮುಜಾಫರ್‌ಪುರ ಮತ್ತು ಅರಾಹ್‌ ಸೇರಿದಂತೆ ಹಲವು ಕಡೆಗಳಲ್ಲಿ ಇಂದು ಟೊಮೆಟೊ ಮಾರಾಟ ಪ್ರಾರಂಭವಾಗಿದೆ ಎಂದು ತಿಳಿಸಿದೆ.

ಆಯಾ ಸ್ಥಳಗಲ್ಲಿನ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳನ್ನು ಅವಲಂಬಿಸಿ ಸೋಮವಾರದಿಂದ ಹೆಚ್ಚಿನ ನಗರಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ದೇಶದ ಹಲವೆಡೆ ಟೊಮೇಟೊ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಮತ್ತು ಕರ್ನಾಟಕದಿಂದ ಟೊಮೇಟೊ ಖರೀದಿ ಮಾಡುವಂತೆ ಕೇಂದ್ರ ಸರ್ಕಾರವು ಸಹಕಾರ ಕ್ಷೇತ್ರದ ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಸೂಚಿಸಿತ್ತು. 

ದೆಹಲಿ-ಎನ್‌ಸಿಆರ್‌ನಾದ್ಯಂತ ಸರಿಸುಮಾರು 18,000 ಕೆಜಿ ಟೊಮೇಟೊಗಳನ್ನು ಮಾರಾಟ ಮಾಡಲಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT