ಪ್ರಧಾನಿ ಮೋದಿ, ಜೆ ಪಿ ನಡ್ಡಾ(ಸಂಗ್ರಹ ಚಿತ್ರ) 
ದೇಶ

ಎನ್ ಡಿಎ v/s ವಿಪಕ್ಷಗಳ ಸಭೆ: ಆಡಳಿತ-ವಿಪಕ್ಷಗಳ ಶಕ್ತಿ ಪ್ರದರ್ಶನ, ಲೋಕಸಭೆ ಚುನಾವಣೆಯ ರಣಕಹಳೆಗೆ ವೇದಿಕೆ ಸಿದ್ಧ

ಇತ್ತ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷಗಳ ನಾಯಕರೆಲ್ಲಾ ಒಟ್ಟು ಸೇರಿ ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ವೇದಿಕೆ ಸಿದ್ಧಪಡಿಸುತ್ತಿದ್ದರೆ ಅತ್ತ ದೆಹಲಿಯಲ್ಲಿ ನಾಳೆ ಎನ್ ಡಿಎ ಮೈತ್ರಿಕೂಟ ಸಭೆ ಕರೆಯಲಾಗಿದೆ.

ನವದೆಹಲಿ: ಇತ್ತ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷಗಳ ನಾಯಕರೆಲ್ಲಾ ಒಟ್ಟು ಸೇರಿ ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ವೇದಿಕೆ ಸಿದ್ಧಪಡಿಸುತ್ತಿದ್ದರೆ ಅತ್ತ ದೆಹಲಿಯಲ್ಲಿ ನಾಳೆ ಎನ್ ಡಿಎ ಮೈತ್ರಿಕೂಟ ಸಭೆ ಕರೆಯಲಾಗಿದೆ.

ನಾಳೆ ಸಂಜೆ ದೆಹಲಿಯ ಅಶೋಕ ಹೊಟೇಲ್ ನಲ್ಲಿ ಸಭೆ ನಡೆಯಲಿದ್ದು ಕನಿಷ್ಠ 31 ಮೈತ್ರಿಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ. 31 ಪಕ್ಷಗಳಲ್ಲಿ ಆರು ಹೊಸ ಪಕ್ಷಗಳು ಕೂಡ ಸೇರಿಕೊಂಡಿವೆ. ಈಗಾಗಲೇ ಇರುವ ಮೈತ್ರಿ ಪಕ್ಷಗಳ ಜೊತೆ ಬಿಜೆಪಿ ಹಲವು ಮಾಜಿ ಮತ್ತು ಹೊಸ ಪಕ್ಷಗಳಿಗೂ ಸಭೆಗೆ ಆಹ್ವಾನ ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಹಾಗೂ ಇತರ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಹೊಸದಾಗಿ ಸೇರ್ಪಡೆಗೊಂಡವರಲ್ಲಿ ಉತ್ತರ ಪ್ರದೇಶದಿಂದ SBSP, ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಮತ್ತು ಬಿಹಾರದ ಚಿರಾಗ್ ಪಾಸ್ವಾನ್‌ನ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಸೇರಿದಂತೆ ನಾಲ್ವರು ಸೇರಿದ್ದಾರೆ.

ಬಿಹಾರದ ನಾಲ್ವರು ನಾಯಕರು -- ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಚಿರಾಗ್ ಪಾಸ್ವಾನ್, ಹಿಂದೂಸ್ತಾನಿ ಅವಾಮ್ ಮೋರ್ಚಾದ ಜಿತನ್ ರಾಮ್ ಮಾಂಝಿ, ರಾಷ್ಟ್ರೀಯ ಲೋಕ ಸಮತಾ ಪಕ್ಷದ ಉಪೇಂದ್ರ ಸಿಂಗ್ ಕುಶ್ವಾಹಾ ಮತ್ತು ವಿಕಾಸಶೀಲ ಇನ್ಸಾನ್ ಪಕ್ಷದ ಮುಖೇಶ್ ಸಹಾನಿ ಅವರನ್ನು ಆಹ್ವಾನಿಸಲಾಗಿದೆ. 

ಬಿಜೆಪಿ ನಾಯಕತ್ವವು ಪಶ್ಚಿಮ ಉತ್ತರ ಪ್ರದೇಶದಲ್ಲಿ ಎಸ್‌ಪಿಯ ಮಿತ್ರಪಕ್ಷವಾದ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (RLD) ಯೊಂದಿಗೆ ಸಹ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ. ಜೂನ್ 23 ರಂದು ಪ್ರತಿಪಕ್ಷಗಳ ಸಭೆಯಿಂದ ಹೊರಗುಳಿದ ಚೌಧರಿ ಅವರು ಇಂದು ಬೆಂಗಳೂರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ.

ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮಾಜಿ ಅಖಿಲೇಶ್ ಯಾದವ್ ಮಿತ್ರ ಓಂ ಪ್ರಕಾಶ್ ರಾಜ್‌ಭರ್ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಮರು ಸೇರ್ಪಡೆಗೊಳ್ಳುವುದಾಗಿ ಹೇಳಿದ್ದಾರೆ.  ಮೌ ಜಿಲ್ಲೆಯ ಘೋಸಿಯ ಸಮಾಜವಾದಿ ಪಕ್ಷದ ಶಾಸಕ ದಾರಾ ಸಿಂಗ್ ಚೌಹಾಣ್ ಅವರು ನಿನ್ನೆ ಉತ್ತರ ಪ್ರದೇಶ ವಿಧಾನಸಭೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡರು. 

ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಮತ್ತು ಬಾದಲ್ ಕುಟುಂಬದ ನೇತೃತ್ವದ ಶಿರೋಮಣಿ ಅಕಾಲಿದಳವು ಹಲವು ಊಹಾಪೋಹಗಳ ನಂತರವೂ ಎನ್ಡಿಎ ಭಾಗವಾಗುವುದಿಲ್ಲ. ಈ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಪಂಜಾಬ್ ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಆಂಧ್ರ ಪ್ರದೇಶದಲ್ಲಿ ಪವನ್ ಕಲ್ಯಾಣ್ ನಾಯಕತ್ವದ ಜನಸೇನಾ ಪಾರ್ಟಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಎನ್‌ಡಿಎ ಮೈತ್ರಿಕೂಟ: ಪ್ರಸ್ತುತ ಎನ್ ಡಿಎ ಮೈತ್ರಿಕೂಟ 24 ಪಕ್ಷಗಳನ್ನು ಹೊಂದಿದೆ. ಬಿಜೆಪಿ, ಎಐಎಡಿಎಂಕೆ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ), ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸಿವ್ ಪಾರ್ಟಿ), ಎಸ್‌ಕೆಎಂ (ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ), ಜೆಜೆಪಿ (ಜನನಾಯಕ್ ಜನತಾ ಪಾರ್ಟಿ), ಐಎಂಕೆಎಂಕೆ ( ಭಾರತೀಯ ಮಕ್ಕಳ್ ಕಲ್ವಿ ಮುನ್ನೇತ್ರ ಕಜ್ಗಮ್), AJSU (ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್), RPI (ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ), MNF (ಮಿಜೋ ನ್ಯಾಷನಲ್ ಫ್ರಂಟ್), TMC (ತಮಿಳು ಮನಿಲಾ ಕಾಂಗ್ರೆಸ್), IPFT (ತ್ರಿಪುರ), BPP (ಬೋಡೋ ಪೀಪಲ್ಸ್ ಪಾರ್ಟಿ), PMK (ಪಾಟಲಿ ಮಕ್ಕಳ್ ಕಚ್ಚಿ), ಎಂಜಿಪಿ (ಮಹಾಸ್ತ್ರವಾದಿ ಗೋಮಾಂತಕ್ ಪಾರ್ಟಿ), ಅಪ್ನಾ ದಳ, ಎಜಿಪಿ (ಅಸ್ಸಾಂ ಗಣ ಪರಿಷತ್), ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ, ನಿಶಾದ್ ಪಾರ್ಟಿ, ಯುಪಿಪಿಎಲ್ (ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್), ಎಐಆರ್‌ಎನ್‌ಸಿ (ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್ ಪುದುಚೇರಿ), ಶಿರೋಮಣಿ ಅಕ್ದುಚೇರಿ ದಲ್ ಸಾಯುಂಕ್ತ್ (ಧಿಂಧ್ಸಾ), ಮತ್ತು ಜನಸೇನಾ (ಪವನ್ ಕಲ್ಯಾಣ್).

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT