ತಮಿಳುನಾಡಿನ ಶಿಕ್ಷಣ ಸಚಿವ ಕೆ ಪೊನ್ಮುಡಿ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮತ್ತೋರ್ವ ಸಚಿವ, ಪುತ್ರನ ಮನೆ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ರಾಜಧಾನಿ ಚೆನ್ನೈನಲ್ಲಿ ಮತ್ತು ವಿಲ್ಲುಪುರಂನಲ್ಲಿರುವ ತಂದೆ-ಮಗನ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.  ಪೊನ್ಮುಡಿ ರಾಜ್ಯ ಗಣಿಗಾರಿಕೆ ಸಚಿವರಾಗಿದ್ದಾಗ (2007 ಮತ್ತು 2011 ರ ನಡುವೆ) ನಡೆದ ಅಕ್ರಮ ಹಾಗೂ ಕ್ವಾರಿ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. 

 ಮತ್ತು ಇದರಿಂದ ರಾಜ್ಯ ಬೊಕ್ಕಸಕ್ಕೆ ಸುಮಾರು 28 ಕೋಟಿ ನಷ್ಟಕ್ಕೆ ಕಾರಣವಾಯಿತು. ಇಡಿ ಇತ್ತೀಚೆಗೆ ಹಿರಿಯ ಡಿಎಂಕೆ ನಾಯಕ ಮತ್ತು ಟಿಎನ್ ಸಾರಿಗೆ ಸಚಿವ ಸೆಂಥಿಲ್ ಬಾಲಾಜಿ ವಿರುದ್ಧ ಇದೇ ರೀತಿಯ ಕ್ರಮವನ್ನು ಪ್ರಾರಂಭಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?