ಪ್ರತಿಪಕ್ಷಗಳ ನಾಯಕರು 
ದೇಶ

ಬೆಂಗಳೂರಿನಲ್ಲಿ ಪ್ರತಿಪಕ್ಷಗಳ 2ನೇ ಸಭೆ: ಸೀಟು ಹಂಚಿಕೆ, ಮೈತ್ರಿಕೂಟದ ಹೆಸರಿನ ಬಗ್ಗೆ ಚರ್ಚೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯಗತಾಯ ಅಧಿಕಾರದಿಂದ ದೂರವಿಡಲು ನಿರ್ಧರಿಸಿರುವ ಪ್ರತಿಪಕ್ಷಗಳು, ಈ ಸಂಬಂಧ ಚರ್ಚಿಸಲು ಪಾಟ್ನಾ ನಂತರ ಬೆಂಗಳೂರಿನಲ್ಲಿ ಎರಡನೇ ಬಾರಿ ಸಭೆ ಸೇರುತ್ತಿವೆ....

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯಗತಾಯ ಅಧಿಕಾರದಿಂದ ದೂರವಿಡಲು ನಿರ್ಧರಿಸಿರುವ ಪ್ರತಿಪಕ್ಷಗಳು, ಈ ಸಂಬಂಧ ಚರ್ಚಿಸಲು ಪಾಟ್ನಾ ನಂತರ ಬೆಂಗಳೂರಿನಲ್ಲಿ ಎರಡನೇ ಬಾರಿ ಸಭೆ ಸೇರುತ್ತಿವೆ. ಈ ಬಾರಿ ಸೀಟು ಹಂಚಿಕೆ ಹಾಗೂ ಮೈತ್ರಿಕೂಟದ ಹೆಸರಿನ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಎರಡು ನಾಳೆ ನಡೆಯಲಿರುವ ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ, 2024ರ ಲೋಕಸಭೆ ಚುನಾವಣೆಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ನಿರ್ಧರಿಸುವ ಹೊರತಾಗಿ ವಿವಿಧ ವಿಷಯಗಳ ಬಗ್ಗೆ ನಿರ್ಧರಿಸಲು ಸಂಚಾಲಕರನ್ನು ನೇಮಿಸಿ, ವಿವಿಧ ತಂಡಗಳನ್ನು ರಚಿಸುವ ಸಾಧ್ಯತೆಯಿದೆ.

ಪ್ರತಿಪಕ್ಷಗಳಲ್ಲಿಯೇ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿರುವುದರಿಂದ, ತಾನೇ ಹೊಸ ಮೈತ್ರಿಕೂಟದ  ನೇತೃತ್ವದ ವಹಿಸಿಕೊಳ್ಳಲು ಕಾಂಗ್ರೆಸ್ ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಕಾಂಗ್ರೆಸ್ ಈ ವಿಷಯದಲ್ಲಿ ಅಚಲವಾಗಿರದಿರಬಹುದು ಮತ್ತು ವಿರೋಧ ಪಕ್ಷಗಳ ಸಂಯೋಜಿತ ನಿರ್ಧಾರ ಒಪ್ಪಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರಿಗೆ ಯಾವುದೇ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆಯನ್ನು ಯಾವುದೇ ಒಬ್ಬ 'ನಾಯಕ ವರ್ಸಸ್ ಮೋದಿ' ನಡುವಿನ ಯುದ್ಧವನ್ನಾಗಿ ಮಾಡದೆ, ಸಮಸ್ಯೆಗಳ ಮೇಲೆ ಕೇಂದ್ರೀಕರಿಸಲು ಮತ್ತು ಅದನ್ನು 'ಮೋದಿ ವರ್ಸಸ್ ಜನರ' ಯುದ್ಧವನ್ನಾಗಿ ಮಾಡಲು ವಿರೋಧ ಪಕ್ಷಗಳು ಉತ್ಸುಕವಾಗಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರತಿಪಕ್ಷಗಳ ಸಂಚಾಲಕರನ್ನಾಗಿ ಮಾಡಲು ಕೆಲವು ಪಕ್ಷಗಳು ಪ್ರಸ್ತಾಪಿಸಿದ್ದವು ಮತ್ತು ಈ ವಿಷಯದ ಬಗ್ಗೆ ಒಮ್ಮತ ಮೂಡಿದರೆ ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT