ದೆಹಲಿಯಲ್ಲಿ ಪ್ರವಾಹ 
ದೇಶ

ಯಮುನಾ ನೀರಿನ ಮಟ್ಟ ಏರುತ್ತಿದೆ, ಆದರೆ ದೆಹಲಿ ಜನರಿಗೆ ಅಪಾಯವಿಲ್ಲ: ಸಚಿವೆ ಅತಿಶಿ

ಯಮುನಾ ನದಿಯ ನೀರಿನ ಮಟ್ಟವು ಮತ್ತೆ ಹೆಚ್ಚಾಗುವ ಸೂಚನೆ ತೋರಿಸುತ್ತಿರುವುದರಿಂದ ಜನ ಕಾಳಜಿ ಕೇಂದ್ರಗಳಲ್ಲೇ ಉಳಿಯಬೇಕು ಎಂದು ದೆಹಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು ಸೋಮವಾರ ಮನವಿ ಮಾಡಿದ್ದಾರೆ.

ನವದೆಹಲಿ: ಯಮುನಾ ನದಿಯ ನೀರಿನ ಮಟ್ಟವು ಮತ್ತೆ ಹೆಚ್ಚಾಗುವ ಸೂಚನೆ ತೋರಿಸುತ್ತಿರುವುದರಿಂದ ಜನ ಕಾಳಜಿ ಕೇಂದ್ರಗಳಲ್ಲೇ ಉಳಿಯಬೇಕು ಎಂದು ದೆಹಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು ಸೋಮವಾರ ಮನವಿ ಮಾಡಿದ್ದಾರೆ.

ಹರಿಯಾಣದ ಕೆಲವು ಪ್ರದೇಶಗಳಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಸ್ವಲ್ಪಮಟ್ಟಿಗೆ ಏರಿದೆ ಎಂದು ಅವರು ತಿಳಿಸಿದ್ದಾರೆ.

"ಯಮುನಾ ನದಿ ನೀರಿನ ಮಟ್ಟವು ರಾತ್ರೋರಾತ್ರಿ 206.1 ಮೀಟರ್ ಗೆ ತಲುಪಬಹುದು ಎಂದು ಕೇಂದ್ರ ಜಲ ಆಯೋಗ ಅಂದಾಜಿಸಿದೆ. ಆದರೆ ಇದರಿಂದ ದೆಹಲಿಯ ಜನರಿಗೆ ಯಾವುದೇ ಅಪಾಯವಿಲ್ಲ. ಆದರೂ ಕಾಳಜಿ ಕೇಂದ್ರಗಳಲ್ಲಿ ವಾಸಿಸುವ ಎಲ್ಲಾ ಜನ ಇನ್ನೂ ತಮ್ಮ ಮನೆಗಳಿಗೆ ಹಿಂತಿರುಗದಂತೆ ವಿನಂತಿಸಲಾಗಿದೆ.

ಯಮುನಾ ನದಿ ನೀರಿನ ಮಟ್ಟವು ಅಪಾಯ ಮಟ್ಟಕ್ಕಿಂತ ಕಡಿಮೆಯಾದ ನಂತರವೇ ನಿಮ್ಮ ನಿಮ್ಮ ಮನೆಗಳಿಗೆ ಹಿಂತಿರುಗಿ" ಎಂದು ಅತಿಶಿ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯಮುನಾ ನೀರಿನ ಇಂದು ಮಟ್ಟವು ಇಂದು ಬೆಳಗ್ಗೆ 9 ಗಂಟೆಗೆ 205.58 ಮೀಟರ್‌ ಇತ್ತು. ಅದು ಮಧ್ಯಾಹ್ನ 12 ಗಂಟೆಗೆ 205.80 ಮೀಟರ್‌ಗೆ ಏರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT