ಬ್ರಿಜ್ ಭೂಷಣ್ ಸಿಂಗ್ 
ದೇಶ

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರು

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಪ್ರಕರಣದ ಮತ್ತೋರ್ವ ಆರೋಪಿ ವಿನೋದ್ ತೋಮರ್ ಗೆ ಇಂದು ಮದ್ಯಂತರ ಜಾಮೀನು ಮಂಜೂರು ಮಾಡಿದೆ. 

ಅಂತೆಯೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ತಿಳಿಸಿದೆ.

ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ಹೊರತಾಗಿಯೂ ಬ್ರಿಜ್ ಭೂಷಣ್ ಗೆ ಜಾಮೀನು ದೊರೆತಿರುವುದು ಹಲವರ ಹುಬ್ಬೇರಿಸಿದೆ. ಚಾರ್ಜ್ ಶೀಟ್ ನಲ್ಲಿ ಹಲವು ಗಂಭೀರ ಆರೋಪಗಳಿದ್ದರೂ ಅವರನ್ನೇಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ್ದ ದೆಹಲಿ ಪೊಲೀಸರು, ಬ್ರಿಜ್ ಭೂಷಣ್ ಅವರು ನಿರ್ದೇಶನಗಳನ್ನು ಪಾಲಿಸಿದ್ದಾರೆ ಮತ್ತು ತನಿಖೆಗೆ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದರು.

ಕುಸ್ತಿಪಟುಗಳಿಂದ ಯಾವುದೇ ಪುರಾವೆ ಸಿಕ್ಕಿಲ್ಲ
ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ತೆರಳಿದ ನಂತರ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಏಳು ವರ್ಷಗಳವರೆಗಿನ ಶಿಕ್ಷಾರ್ಹ ಅಪರಾಧಗಳ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಬಾರದು ಎಂದು ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಕುಸ್ತಿ ಫೆಡರೇಷನ್‌ನ ಸಿಬ್ಬಂದಿಗಳು ಕುಸ್ತಿಪಟುಗಳ ಹೇಳಿಕೆಗಳನ್ನು ದೃಢೀಕರಿಸಲಿಲ್ಲ ಮತ್ತು ಪೊಲೀಸರು ಪದೇ ಪದೇ ವಿನಂತಿಸಿದರೂ ಬೆದರಿಕೆ ಕರೆಗಳ ಕುರಿತು ಕುಸ್ತಿಪಟುಗಳಿಂದ ಯಾವುದೇ ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಬ್ರಿಜ್ ಭೂಷಣ್ ರಕ್ಷಿಸಲು ತನಿಖಾ ಸಮಿತಿ ಹುನ್ನಾರ : ಕುಸ್ತಿ ಪಟುಗಳ ಆರೋಪ
ಭಾರತದ ದಿಗ್ಗಜ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಸರ್ಕಾರ ರಚಿಸಿದ ಆರು ಸದಸ್ಯರ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಆದರೆ ಅದನ್ನು ಸಾರ್ವಜನಿಕಗೊಳಿಸಲಾಗಿಲ್ಲ.ಇದರ ಬೆನ್ನಲ್ಲೇ ಕುಸ್ತಿಪಟುಗಳು ಇಂತಹ ಆರೋಪ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT