ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ(ಸಂಗ್ರಹ ಚಿತ್ರ) 
ದೇಶ

ಮದ್ರಾಸ್ ಹೈಕೋರ್ಟ್‌ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ವಿಭಿನ್ನ ತೀರ್ಪು ನೀಡಿದ್ದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿ ಸಮರ್ಥನೀಯವಾಗಿದೆ, ಅವರನ್ನು ಬಿಡುಗಡೆ ಮಾಡಬಹುದು ಎಂದು ಹೇಳಿದ್ದರು. ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾಯಮೂರ್ತಿ ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ, ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಹೇಳಿದ್ದರು.

ಸೆಂಥಿಲ್ ಬಾಲಾಜಿ ಹಾಗೂ ಅವರ ಪತ್ನಿ ಮೇಗಾಲಾ ಕೂಡ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಜೂನ್ 14 ರಂದು ತಮಿಳುನಾಡು ಸಚಿವರನ್ನು ಬಂಧಿಸಿತ್ತು. ಆದಾಗ್ಯೂ, ಇಡಿ ದಾಳಿಯ ಸಮಯದಲ್ಲಿ ಅವರು ಅಸ್ವಸ್ಥಗೊಂಡಿದ್ದರಿಂದ ಚೆನ್ನೈನ ಒಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟಿ: 'ಎನ್‌ಕೌಂಟರ್‌' ನಲ್ಲಿ 14 ನಕ್ಸಲೀಯರ ಹತ್ಯೆ!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆ

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

SCROLL FOR NEXT