ಬಸ್ ನಡಿಗೆ ಬಂದ ತಾಯಿ 
ದೇಶ

ಭೀಕರ: ಮಗನ ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಚಲಿಸುತ್ತಿದ್ದ ಬಸ್ ಗೆ ಅಡ್ಡ ಬಿದ್ದು ತಾಯಿ ಆತ್ಮಹತ್ಯೆ

ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲು ಆಗದೇ ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸೇಲಂ: ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲು ಆಗದೇ ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ 'ಸಫಾಯಿ ಕರ್ಮಚಾರಿ' (ಸ್ವಚ್ಛತಾ ಸಿಬ್ಬಂದಿ) ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ ನ ಮುಂದೆ ಜಿಗಿದಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ.  

ಮೂಲಗಳ ಪ್ರಕಾರ ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45,000 ರೂ.ಲಭಿಸುವುದಾಗಿ ಹೇಳಿ ಯಾರೋ ದಾರಿ ತಪ್ಪಿಸಿದ್ದರಿಂದ ಮಹಿಳೆ ಈ ರೀತಿ ಮಾಡಿದ್ದಾರೆ. ಇದೇ ಕಾರಣಕ್ಕೆ ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ತಾಯಿ ಬಸ್ ಕಡೆಗೆ ಹೋಗುವ ವಿಡಿಯೋ ಆ ರಸ್ತೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. 

ಇನ್ನು ಈ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂಯೆ ಎಚ್ಚೆತ್ತುಕೊಂಡಿರುವ ಸೇಲಂ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT