ಚಿರಾಗ್ ಪಾಸ್ವಾನ್ ಆಲಂಗಿಸಿಕೊಂಡ ಪ್ರಧಾನಿ ಮೋದಿ 
ದೇಶ

'ಈ ಪ್ರೀತಿ-ಗೌರವಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು': ಎನ್ ಡಿಎ ಸಭೆ ನಂತರ ಚಿರಾಗ್ ಪಾಸ್ವಾನ್ ಟ್ವೀಟ್

ದೆಹಲಿಯಲ್ಲಿ ನಿನ್ನೆ ಮಂಗಳವಾರ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆಯಲ್ಲಿ ಅಪರೂಪದ ದೃಶ್ಯವೊಂದಕ್ಕೆ ಸಾಕ್ಷಿಯಾಯಿತು. ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್ ಪಾಸ್ವಾನ್)ದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi)ಆತ್ಮೀಯವಾಗಿ ಪ್ರೀತಿಯಿಂದ ಆಲಂಗಿಸಿಕೊಂಡರು.

ನವದೆಹಲಿ: ದೆಹಲಿಯಲ್ಲಿ ನಿನ್ನೆ ಮಂಗಳವಾರ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆಯಲ್ಲಿ ಅಪರೂಪದ ದೃಶ್ಯವೊಂದಕ್ಕೆ ಸಾಕ್ಷಿಯಾಯಿತು. ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್ ಪಾಸ್ವಾನ್)ದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi)ಆತ್ಮೀಯವಾಗಿ ಪ್ರೀತಿಯಿಂದ ಆಲಂಗಿಸಿಕೊಂಡರು.

ಎನ್ ಡಿಎ ಸಭೆ ಮುಗಿದ ಕೂಡಲೇ ಟ್ವೀಟ್ ಮಾಡಿ ಪ್ರಧಾನ ಮಂತ್ರಿಗಳಿಗೆ ಧನ್ಯವಾದ ಹೇಳಿದ ಚಿರಾಗ್ ಪಾಸ್ವಾನ್, ನನ್ನನ್ನು ಆಲಂಗಿಸಿಕೊಂಡು ಪ್ರೀತಿ ಗೌರವ ತೋರಿಸಿದ್ದಕ್ಕೆ ನಿಮಗೆ ಹೃದಯಾಂತರಾಳದಿಂದ ಧನ್ಯವಾದಗಳು ಗೌರವಾನ್ವಿತ ಪ್ರಧಾನ ಮಂತ್ರಿಗಳೇ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಎನ್ ಡಿಎ ಸಭೆಯ ಬಗ್ಗೆ ಮಾತನಾಡಿರುವ ಚಿರಾಗ್ ಪಾಸ್ವಾನ್(Chirag Paswan), ಇಂದಿನ ಎನ್ ಡಿಎ ಸಭೆಯಲ್ಲಿ ಎಲ್ಲಾ ನಾಯಕರು ಉತ್ಸಾಹಭರಿತವಾಗಿ ಪ್ರಧಾನಿ ಮೋದಿಯವರಿಗೆ ಬೆಂಬಲ ಸೂಚಿಸಿದ್ದಾರೆ. ನಾನು ಮತ್ತು ನನ್ನ ಪಕ್ಷ ಕೂಡ ಪ್ರಧಾನಿಯವರಿಗೆ ಬೆಂಬಲ ನೀಡುತ್ತದೆ ಎಂದಿದ್ದಾರೆ.

ತಮ್ಮ ದಿವಂಗತ ತಂದೆಯವರ ಪಕ್ಷದಿಂದ ಬಂಡಾಯವೆದ್ದು ಹೊರಬಂದ ಚಿಕ್ಕಪ್ಪ ಬಿಹಾರದ ಹಜಿಪುರದ ಲೋಕಸಭಾ ಸದಸ್ಯ ಪಶುಪತಿ ಪರಸ್ ಅವರನ್ನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯನ್ನಾಗಿ ಮಾಡಿದ ನಂತರ ಚಿರಾಗ್ ಪಾಸ್ವಾನ್ ಬೇಸರಗೊಂಡಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿದ್ದವು. 

ಚಿರಾಗ್ ಪಾಸ್ವಾನ್ ಆಲಂಗಿಸುವ ಮೂಲಕ ಪ್ರಧಾನಿ ಮೋದಿಯವರು ಬಿಹಾರ ಜನತೆಗೆ ಅತಿದೊಡ್ಡ ಸಂದೇಶ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಪರಸ್ ಇಬ್ಬರೂ ಹಜಿಪುರ್ ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದು ಯಾರಿಗೆ ಸ್ಪರ್ಧೆಗೆ ಅವಕಾಶ ಸಿಗಲಿದೆ ಎಂಬುದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT