ಅಸಾದುದ್ದೀನ್ ಓವೈಸಿ (ಸಂಗ್ರಹ ಚಿತ್ರ) 
ದೇಶ

'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆ

ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮುಂಬೈ: ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪಕ್ಷದ ನಾಯಕ ಹಾಗೂ ವಕ್ತಾರ ವಾರಿಸ್ ಪಠಾಣ್, ಜಾತ್ಯತೀತ ಪಕ್ಷಗಳು ಎಂದು ಕರೆದುಕೊಳ್ಳುತ್ತಿರುವವರು ತಮ್ಮನ್ನು "ರಾಜಕೀಯ ಅಸ್ಪೃಶ್ಯರು" ಎಂದು ಪರಿಗಣಿಸುತ್ತಿವೆ. ಅಸಾದುದ್ದೀನ್ ಓವೈಸಿ ಅವರ ಪಕ್ಷವನ್ನು ಯಾರಾದರೂ ಹೇಗೆ ನಿರ್ಲಕ್ಷಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

“ಜಾತ್ಯತೀತ ಪಕ್ಷಗಳು ಎಂದು ಕರೆದಿಲ್ಲ, ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು, ನಿತೀಶ್ ಕುಮಾರ್, ಉದ್ಧವ್ ಠಾಕ್ರೆ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ಒಂದು ಕಾಲದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಯಲ್ಲಿದ್ದ ನಾಯಕರೂ ಮೈತ್ರಿಕೂಟದಲ್ಲಿ ಇದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅನ್ನು ನಿಂದಿಸುವುದನ್ನು ನಾವು ನೋಡಿದ್ದೇವೆ.

ಗುಜರಾತ್ ಅಸೆಂಬ್ಲಿ ಚುನಾವಣೆ, ಆದರೆ ಅವರು ಬೆಂಗಳೂರಿನಲ್ಲಿ ಕುಳಿತಿದ್ದಾರೆ, ನಾವು (ಎಐಎಂಐಎಂ) ಸಹ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ, ಆದರೆ ಅವರು (ವಿರೋಧ ಪಕ್ಷಗಳು) ಅಸಾದುದ್ದೀನ್ ಓವೈಸಿ ಮತ್ತು ನಮ್ಮ ಪಕ್ಷವನ್ನು ಕಡೆಗಣಿಸುತ್ತಿದ್ದಾರೆ" ಎಂದು ಅವರು ಕಿಡಿಕಾರಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT