ಸಾಂಕೇತಿಕ ಚಿತ್ರ 
ದೇಶ

ಮಣಿಪುರ: ಇಬ್ಬರು ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ಸೂಚನೆ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ, ಪರೇಡ್ ಮಾಡಿಸಿದ ಬಳಿಕ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಗುರುವಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಆಕ್ಷೇಪಾರ್ಹ ವಿಡಿಯೋವನ್ನು ಹಂಚಿಕೊಳ್ಳದಂತೆ ಸೂಚನೆ ನೀಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. 

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ, ಪರೇಡ್ ಮಾಡಿಸಿದ ಬಳಿಕ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಗುರುವಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಆಕ್ಷೇಪಾರ್ಹ ವಿಡಿಯೋವನ್ನು ಹಂಚಿಕೊಳ್ಳದಂತೆ ಸೂಚನೆ ನೀಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಪ್ರಗತಿಯಲ್ಲಿರುವುದರಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತೀಯ ಕಾನೂನುಗಳಿಗೆ ಬದ್ಧವಾಗಿರುವುದು ಕಡ್ಡಾಯವಾಗಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿವೆ.

ಗಲಭೆ ಪೀಡಿತ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ಬುಧವಾರ ವೈರಲ್ ಆಗಿದ್ದು, ಸಂಘರ್ಷ ಪೀಡಿತ ರಾಜ್ಯದಲ್ಲಿ ಅನೇಕರು ಆಘಾತಕ್ಕೊಳಗಾಗಿದ್ದಾರೆ ಮತ್ತು ಘಟನೆಯನ್ನು ಖಂಡಿಸಿದ್ದಾರೆ.

ಇಬ್ಬರು ಮಹಿಳೆಯರನ್ನು ಭತ್ತದ ಗದ್ದೆಗೆ ಕರೆದೊಯ್ಯುವಾಗ ಪುರುಷರನ್ನು ಒಳಗೊಂಡ ಗುಂಪು ನಿರಂತರವಾಗಿ ಇಬ್ಬರಿಗೆ ಕಿರುಕುಳ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಸಂತ್ರಸ್ತರು ಸಹಾಯಕ್ಕಾಗಿ ಅಳುತ್ತಿದ್ದರೂ, ನೆರೆದಿದ್ದವರ ಮಾನವೀಯತೆ ಮಣ್ಣು ಪಾಲಾಗಿತ್ತು. 

ಈ ಘಟನೆಯನ್ನು ಮಣಿಪುರದ ಪೊಲೀಸರು ದೃಢೀಕರಿಸಿದ್ದು, ಬುಧವಾರ ಸಂಜೆ ನೀಡಿದ ಹೇಳಿಕೆಯಲ್ಲಿ, ಅಪರಾಧಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT