ಕೊಡಗಿಗೆ ಅಖಿಲೇಶ್ ಯಾದವ್ ಭೇಟಿ 
ದೇಶ

ಮಡಿಕೇರಿ: ಬಿಜೆಪಿ ನೇತೃತ್ವದ ಎನ್ ಡಿಎ ಮಿತ್ರ ಪಕ್ಷಗಳಿಂದ ವಿದಾಯ ಕೂಟ; ಅಖಿಲೇಶ್ ಯಾದವ್ ಲೇವಡಿ

ಕಾಂಗ್ರೆಸ್, ಸಮಾಜ ವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ‘ಇಂಡಿಯಾ’ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು, ಸೋಲಿನ ಹತಾಶೆಯಿಂದ ವಿದಾಯ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷ(ಎಸ್ಪಿ)ದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಮಡಿಕೇರಿ: ಕಾಂಗ್ರೆಸ್, ಸಮಾಜ ವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ‘ಇಂಡಿಯಾ’ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು, ಸೋಲಿನ ಹತಾಶೆಯಿಂದ ವಿದಾಯ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷ(ಎಸ್ಪಿ)ದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಮ್ಗೆ ಭೇಟಿ ನೀಡಿ ಮಹಾನ್ ಸೇನಾನಿಯ ಸೇನಾ ಜೀವನದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹವಾಮಾನದಂತೆ ಮೈತ್ರಿಕೂಟದ ಸಭೆಯ ವಾತಾವರಣವೂ ಬಹಳ ಉತ್ತಮವಾಗಿತ್ತು. ಲೋಕಸಭಾ ಚುನಾವಣೆಯನ್ನು ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು.

‘ಇಂಡಿಯಾ’ ಎಂಬ ಹೊಸ ಹೆಸರಿನಿಂದ ಸಹಜವಾಗಿಯೇ ಬಿಜೆಪಿ ಆತಂಕಕ್ಕೊಳಗಾಗಿದೆ. ‘ಇಂಡಿಯಾ’ ಹೆಸರು ತನ್ನದು ಎಂದು ಈವರೆಗೂ ನಮ್ಮನ್ನು ಹೆದರಿಸುತ್ತಿದ್ದ ಬಿಜೆಪಿ ಇದೀಗ ಮೈತ್ರಿ ಪಕ್ಷಗಳು ಯಾವಾಗ ‘ಇಂಡಿಯಾ’ ಎಂದು ಹೆಸರಿಟ್ಟಿತೋ ಆಗಲೇ ಗಲಿಬಿಲಿಗೊಳಗಾಗಿ ದೆ. ಮುಂದಿನ ದಿನಗಳಲ್ಲಿ ‘ಇಂಡಿಯಾ’ವನ್ನು ಪ್ರಬಲಗೊಳಿಸುತ್ತಾ ಭಾರತೀಯರ ಆಶೋತ್ತರಕ್ಕೆ ತಕ್ಕಂತೆ ದೇಶವನ್ನು ಬಿಜೆಪಿ ಹಿಡಿತದಿಂದ ದೂರ ಮಾಡಲಿದ್ದೇವೆ ಎಂದು ಅಖಿಲೇಶ್ ಹೇಳಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬಡತನ, ಹಾಗೇ ಇದೆ. ದಿನಬಳಕೆಯ ವಸ್ತುಗಳ ದರ ಹೆಚ್ಚುತ್ತಲೇ ಇದೆ. ನೋಟು ಅಮಾನ್ಯೀಕರಣದ ನಂತರವೂ ದೇಶದಲ್ಲಿ ಭ್ರಷ್ಟಾಚಾರ ಕೊನೆಯಾಗಲಿಲ್ಲ ಎಂದರೆ ನೋಟು ಅಮಾನ್ಯೀಕರಣ ನಿರ್ಧಾರವೇ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದು ಎಂದು ಹೇಳಬೇಕಾಗುತ್ತದೆ. ನೋಟು ಅಮಾನ್ಯೀಕರಣವನ್ನು ಸಮರ್ಥಿಸುವ ಒಂದೇ ಒಂದು ಕಾರಣವನ್ನೂ ಈವರೆಗೂ ಬಿಜೆಪಿಯಿಂದ ನೀಡಲಾಗಲಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT