ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡೀಯೋ ದೃಶ್ಯ 
ದೇಶ

ಮಣಿಪುರ ವೀಡಿಯೋ: ಮುಖ್ಯ ಆರೋಪಿಯ ಬಂಧನ; ಮೇ, ಜೂನ್ ನಲ್ಲೆ ಪ್ರತ್ಯೇಕ ಎಫ್ಐಆರ್ ಹಾಕಲಾಗಿತ್ತು!

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಟ್ ಮಾಡಿರುವ ವೀಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂಬಂಧ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. 

ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಟ್ ಮಾಡಿರುವ ವೀಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂಬಂಧ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. 

ಆತನ ಬಂಧನವಾಗುತ್ತಿದ್ದಂತೆಯೇ ಆರೋಪಿಯ ವಿರುದ್ಧ ಆಕ್ರೋಶಗೊಂಡ ಗುಂಪೊಂದು ಆತನ ಮನೆಗೆ ಬೆಂಕಿ ಹಚ್ಚಿದೆ. ಈ ನಡುವೆ ಸ್ಥಳೀಯ ಮಾಧ್ಯಮಗಳು ಮತ್ತೋರ್ವ ಆರೋಪಿಯ ಬಂಧನದ ಸುದ್ದಿಯನ್ನು ಪ್ರಕಟಿಸಿವೆ. ಆದರೆ 2 ನೇ ಆರೋಪಿಯ ಬಂಧನದ ಸುದ್ದಿ ಇನ್ನೂ ಅಧಿಕೃತವಾಗಿಲ್ಲ. 

ಮಹಿಳೆಯರ ಮೇಲಿನ ಈ ಕೃತ್ಯ ಮೇ.04 ರಂದು  ಕಾಂಗ್ಪೋಕ್ಪಿ ಜಿಲ್ಲೆಯ ಫೈನೋಮ್ ಗ್ರಾಮದಲ್ಲಿ ನಡೆದಿತ್ತು. 

ಅನಾಮಿಕ ದುಷ್ಕರ್ಮಿಗಳೆಂದು ಉಲ್ಲೇಖಿಸಿ ಘಟನೆಗೆ ಸಂಬಂಧಿಸಿದಂತೆ ನಾಂಗ್ಪೋಕ್ ಸೆಕ್ಮೈ ಪೋಲಿಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಹತ್ಯೆ ಹಾಗೂ ಇನ್ನಿತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಸಿಎಂ ಬಿರೇನ್ ಸಿಂಗ್ ಮಾತನಾಡಿದ್ದು, ಪೊಲೀಸರು ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡಿದ್ದಾರೆ. ಈ ನಡುವೆ ತಂಗ್ಬೋಯಿ ವೈಫೇಯ್ ಮೇ.18 ರಂದು ಕಾಂಗ್ಪೋಪಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ಹಾಗೂ ಜೂ.21 ರಂದು ತೌಬಲ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ನ್ನು ದಾಖಲಿಸಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT