ಸೋನಿಯಾ ಗಾಂಧಿ - ನರೇಂದ್ರ ಮೋದಿ 
ದೇಶ

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮುಖಾಮುಖಿ; ಕೆಲಕಾಲ ಮಾತುಕತೆ

ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ಅಧಿವೇಶನದ ಮೊದಲ ದಿನ ಸದನಕ್ಕೆ ಆಗಮಿಸಿದ ಮೋದಿ ಅವರು, ಕಲಾಪ ಆರಂಭವಾಗುವ ಮುನ್ನವೇ ವಿವಿಧ ನಾಯಕರಿಗೆ ಶುಭಾಶಯ ಕೋರಿದರು.

ಈ ವೇಳೆ ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ತಲುಪಿದ ಅವರು, ಸೋನಿಯಾ ಗಾಂಧಿಯವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಸಂಸತ್ ಅಧಿವೇಶನದ ಮೊದಲ ದಿನ ನಾಯಕರು ಪರಸ್ಪರ ಶುಭಾಶಯ ಕೋರುವುದು ವಾಡಿಕೆ.

ಇದಕ್ಕೂ ಮುನ್ನ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಯು 140 ಕೋಟಿ ಭಾರತೀಯರು ನಾಚಿಕೆ ಪಡುವಂತದ್ದು. ಕಾನೂನು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಮತ್ತು ಘಟನೆಯಲ್ಲಿನ ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದರು. 

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರದ ಪ್ರಧಾನಿ ಮೋದಿ ಮಾತನಾಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ, 'ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ' ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಆರೋಪಕ್ಕೆ ಸಿಎಂ ತಿರುಗೇಟು

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

News headlines 20-10-2025| ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೇ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

ಮೈಸೂರು: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

SCROLL FOR NEXT