ಸುಪ್ರೀಂಕೋರ್ಟ್ 
ದೇಶ

ಕೇಂದ್ರದ ದೆಹಲಿ ಸುಗ್ರೀವಾಜ್ಞೆ ಅರ್ಜಿ ವಿಚಾರಣೆಯನ್ನು ಪಂಚ ಪೀಠಕ್ಕೆ ವರ್ಗಾಯಿಸಿದ 'ಸುಪ್ರೀಂ'

ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. 

ನವದೆಹಲಿ: ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. 

ಸುಗ್ರೀವಾಜ್ಞೆಯ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬಹುದು ಎಂದು ಸೂಚಿಸಿತ್ತು. ಕೇಂದ್ರದ ಸೇವಾ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಸುಗ್ರೀವಾಜ್ಞೆಯ ಮೂಲಕ ಸೇವೆಗಳನ್ನು ದೆಹಲಿ ವಿಧಾನಸಭೆಯ ವ್ಯಾಪ್ತಿಯಿಂದ ಹೊರಗಿಡುವುದು ಸರಿಯೇ ಅಥವಾ ಇಲ್ಲವೇ ಎಂಬುದರ ಕುರಿತು ಸುದೀರ್ಘ ವಿಚಾರಣೆ ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಲೆಫ್ಟಿನೆಂಟ್ ಗವರ್ನರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿದ ನಂತರ, ಸುಗ್ರೀವಾಜ್ಞೆಯ ವಿಷಯವನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದರು. ಇದಕ್ಕೆ ನಾವು ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ವಾಸ್ತವವಾಗಿ, ಈ ವರ್ಷದ ಮೇ ತಿಂಗಳಲ್ಲಿ, ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಮತ್ತು ಅಧಿಕಾರಕ್ಕೆ ಸಂಬಂಧಿಸಿದ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡಿತು. ಪೊಲೀಸ್, ಭೂಮಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಹೊರತುಪಡಿಸಿ ಉಳಿದೆಲ್ಲ ವಿಷಯಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ದೆಹಲಿ ಸರ್ಕಾರದ ಸಲಹೆಯನ್ನು ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು. ಇದಾದ ನಂತರ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ತಂದಿತ್ತು. ಅದರಲ್ಲಿ ಮತ್ತೆ ದೆಹಲಿಯ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ಗೆ ಹಿಂತಿರುಗಿಸಲಾಯಿತು.

ಇನ್ನು ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವು ದೆಹಲಿಯಲ್ಲಿ ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆಗೆ ಸಂಬಂಧಿಸಿದ ಈ ಸುಗ್ರೀವಾಜ್ಞೆಯನ್ನು ವಿರೋಧಿಸುತ್ತಿದೆ. ಡ್ಯಾನಿಕ್ಸ್ ಕೇಡರ್‌ನ ಗ್ರೂಪ್-ಎ ಅಧಿಕಾರಿಗಳ ವಿರುದ್ಧ ವರ್ಗಾವಣೆ ಮತ್ತು ಶಿಸ್ತಿನ ಪ್ರಕ್ರಿಯೆಗಳಿಗಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲು ಸುಗ್ರೀವಾಜ್ಞೆ ಒದಗಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT