ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರದಿಂದ ಯವತ್ಮಾಲ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಎತ್ತರದ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕಾಯಿತು. ಮಹಾಗಾಂವ್ ತಾಲೂಕಿನ ಆನಂದನಗರ ಗ್ರಾಮದಲ್ಲಿ ಪ್ರವಾಹದಿಂದಾಗಿ 45 ಜನರು ಸಿಲುಕಿಕೊಂಡಿದ್ದರು.  ಹೀಗಾಗಿ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಮಹಾಗಾಂವ್‌ಗೆ ತೆರಳಲಿದ್ದು,ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮಹಾಗಾಂವ್ ತಾಲೂಕಿನಲ್ಲಿ 231 ಮಿಮೀ ಮಳೆ ದಾಖಲಾಗಿದೆ. ಯವತ್ಮಾಲ್‌ನಲ್ಲಿ ಪ್ರವಾಹದಿಂದಾಗಿ ಸಿಲುಕಿರುವ ಜನರನ್ನು ನಾಗ್ಪುರಕ್ಕೆ  ಸ್ಥಳಾಂತರಿಸಲು Mi-17 V5 ಹೆಲಿಕಾಪ್ಟರ್ ಕಳುಹಿಸಲಾಗಿದೆ ಎಂದು ರಕ್ಷಣಾ ವಿಭಾಗದ ಪಿಆರ್ ಒ ರತ್ನಾಕರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯವತ್ಮಾಲ್ ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಕೆಲವು ಭಾಗಗಳಲ್ಲಿ ಮನೆಗಳು ಮತ್ತು ರಸ್ತೆಗಳು ಜಲಾವೃತವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT