ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರದಿಂದ ಯವತ್ಮಾಲ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಎತ್ತರದ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕಾಯಿತು. ಮಹಾಗಾಂವ್ ತಾಲೂಕಿನ ಆನಂದನಗರ ಗ್ರಾಮದಲ್ಲಿ ಪ್ರವಾಹದಿಂದಾಗಿ 45 ಜನರು ಸಿಲುಕಿಕೊಂಡಿದ್ದರು.  ಹೀಗಾಗಿ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಮಹಾಗಾಂವ್‌ಗೆ ತೆರಳಲಿದ್ದು,ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮಹಾಗಾಂವ್ ತಾಲೂಕಿನಲ್ಲಿ 231 ಮಿಮೀ ಮಳೆ ದಾಖಲಾಗಿದೆ. ಯವತ್ಮಾಲ್‌ನಲ್ಲಿ ಪ್ರವಾಹದಿಂದಾಗಿ ಸಿಲುಕಿರುವ ಜನರನ್ನು ನಾಗ್ಪುರಕ್ಕೆ  ಸ್ಥಳಾಂತರಿಸಲು Mi-17 V5 ಹೆಲಿಕಾಪ್ಟರ್ ಕಳುಹಿಸಲಾಗಿದೆ ಎಂದು ರಕ್ಷಣಾ ವಿಭಾಗದ ಪಿಆರ್ ಒ ರತ್ನಾಕರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯವತ್ಮಾಲ್ ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಕೆಲವು ಭಾಗಗಳಲ್ಲಿ ಮನೆಗಳು ಮತ್ತು ರಸ್ತೆಗಳು ಜಲಾವೃತವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT