ಯವತ್ಮಾಲ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ 
ದೇಶ

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಪ್ರವಾಹ ಪೀಡಿತ ಯವತ್ಮಾಲ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಜನರ ರಕ್ಷಣೆ

ವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದ್ದು, ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯವತ್ಮಾಲ್: ವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದ್ದು, ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅನ್ನು ಆನಂದನಗರ ತಾಂಡಾ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಮೋಲ್ ಯೆಡ್ಗೆ ಅವರು ಪಿಟಿಐಗೆ ತಿಳಿಸಿದ್ದಾರೆ.

ಎಸ್‌ಡಿಆರ್‌ಎಫ್ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ ಎಂದು ಅವರು ಹೇಳಿದ್ದಾರೆ.

ನಾಗ್ಪುರದಿಂದ 150 ಕಿ.ಮೀ ದೂರದಲ್ಲಿರುವ ಯವತ್ಮಾಲ್ ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾರೀ ಮಳೆಯಾಗುತ್ತಿದೆ.

ಇದಕ್ಕು ಮುನ್ನ ಎರಡು ಐಎಎಫ್ ಹೆಲಿಕಾಪ್ಟರ್‌ಗಳು ನಾಗ್ಪುರದಿಂದ ರಕ್ಷಣಾ ಕಾರ್ಯಾಚರಣೆಗಾಗಿ ಯವತ್ಮಾಲ್ ಜಿಲ್ಲೆ ತೆರಳಿವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವೀಟ್ ಮಾಡಿದ್ದರು. ಆದರೆ ಕೇವಲ ಒಂದು ಹೆಲಿಕಾಪ್ಟರ್ ಅನ್ನು ಮಾತ್ರ ಕಳುಹಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದರು.

ಮಹಾಗಾಂವ್ ತಹಸಿಲ್‌ನಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ 231 ಮಿಮೀ ಮಳೆ ದಾಖಲಾಗಿದ್ದರೆ, ಜಿಲ್ಲೆಯಲ್ಲಿ 117.5 ಮಿಮೀ ಮಳೆ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನೊಂದು ಪೂರ್ವ ಮಹಾರಾಷ್ಟ್ರ ಜಿಲ್ಲೆಯ ಬುಲ್ಧಾನಾದ ಸಂಗ್ರಾಮ್‌ಪುರ ತೆಹಸಿಲ್‌ನ ಕಾಸರ್‌ಗಾಂವ್ ಗ್ರಾಮದಲ್ಲಿ ಸುಮಾರು 140 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಮೋಲ್ ಯೆಡ್ಗೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT