ಸಂಗ್ರಹ ಚಿತ್ರ 
ದೇಶ

ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳ ಸಾವು

ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ.

ನೆಲ್ಲೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ.

ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಅಧಿಕಾರಿಗಳು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಆಕ್ಸಿಜನ್ ಕೊರತೆಯಿಂದ ಯಾವುದೇ ರೋಗಿಗಳೂ ಸಾವನ್ನಪ್ಪಿಲ್ಲ. ಕಾಯಿಲೆಗಳಿಂದಲೇ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.

8 ಮಂದಿ ರೋಗಿಗಳ ಪೈಕಿ 6 ಮಂದಿ ತೀವ್ರ ನಿಗಾ ಘಟಕ (ಎಂಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಪರಿಸ್ಥಿತಿ ಕೈಮೀರುವ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು, ಕೂಲಂಕುಷ ತನಿಖೆ ನಡೆಸಿದರು. ಇದರಂತೆ ತನಿಖೆಯ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ವರದಿಯಲ್ಲಿ ಸಾವಿಗೂ, ಆಕ್ಸಿಜನ್ ಕೊರತೆಗೂ ಸಂಬಂಧವಿಲ್ಲ. ವೈದ್ಯಕೀಯ ಕಾರಣಗಳಿಂದಾಗಿಯೇ ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT