ವಂಚನೆ (ಸಾಂಕೇತಿಕ ಚಿತ್ರ) 
ದೇಶ

ಕ್ರಿಕೆಟ್ ಬುಕ್ಕಿಯಿಂದ ಉದ್ಯಮಿಗೆ 58 ಕೋಟಿ ರೂಪಾಯಿಗಳ ಮಹಾ ವಂಚನೆ

ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ. 

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ. 

ಟ್ಯಾಂಪರ್ ಮಾಡಿದ ಬ್ಯಾಟಿಂಗ್ ಆಪ್ ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ,  58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೋಂಡಿಯಾ ಮೂಲದ ವಂಚಕನ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಆರೋಪಿಯ ಮನೆಯ ಮೇಲೆ ಪೊಲೀಸರ ತಂಡ ದಾಳಿ ನಡೆಸಿದ್ದು, ಆರೋಪಿಯನ್ನು ಅನಂತ್ ಜೈನ್ ಅಲಿಯಾಸ್ ಶೋಂಟು ಎಂದು ಗುರುತಿಸಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ. ದಾಳಿ ನಡೆಸಿದ ತಂಡವು ಅವರ ಮನೆಯಲ್ಲಿ 17 ಕೋಟಿ ರೂಪಾಯಿಗೂ ಹೆಚ್ಚು ನಗದು, ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ನಾಗ್ಪುರ ಪೊಲೀಸ್ ತಂಡ (ಅನಂತ್ ಜೈನ್ ) ನಿವಾಸದ ಮೇಲೆ ದಾಳಿ ನಡೆಸಿದೆ. ಪೊಲೀಸರು ದಾಳಿ ನಡೆಸುವುದಕ್ಕೂ ಮುನ್ನವೇ ಆರೋಪಿ ಪರಾರಿಯಾಗಿದ್ದ, ತನಿಖೆ ಪ್ರಗತಿಯಲ್ಲಿದೆ ಎಂದು ನಾಗ್ಪುರದ ಸಿಪಿ ಅಮಿತೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. 

ಇನ್ನೂ ಹಲವರು ಆರೋಪಿಯಿಂದ ವಂಚನೆಗೊಳಗಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕ್ರೈಂ ಬ್ರಾಂಚ್ ಮತ್ತು ಸೈಬರ್ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವು ಅಕ್ರಮ ಅಂತರಾಷ್ಟ್ರೀಯ ವ್ಯಾಪಾರದ ಬಗ್ಗೆ ತನಿಖೆ ನಡೆಸಲಿದೆ ಎಂದು ಸಿಪಿ ಅಮಿತೇಶ್ ಕುಮಾರ್ ಹೇಳಿದ್ದಾರೆ, ಇದು ದುಬೈನಿಂದ ಕಾರ್ಯನಿರ್ವಹಿಸುತ್ತಿದೆ ಮತ್ತು ಭಾರತದಾದ್ಯಂತ ತನ್ನ ಜಾಲವನ್ನು ಹರಡುತ್ತಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ